ಎಚ್.ಎಸ್.ದೊರೆಸ್ವಾಮಿ ಅವರನ್ನು ‘ನಕಲಿ ಸ್ವಾತಂತ್ರ್ಯ ಹೋರಾಟಗಾರ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಟೀಕಿಸಿರುವುದು ಖಂಡನೀಯ. ಬಿಜೆಪಿಯ ಹಲವು ಮುಖಂಡರು ಪದೇ ಪದೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ಈ ಮೂಲಕ ವಿವಾದಗಳನ್ನು ಹುಟ್ಟುಹಾಕುತ್ತಲೇ ಇದ್ದಾರೆ. ಯತ್ನಾಳ ಅವರು ವಯೋವೃದ್ಧ ದೊರೆಸ್ವಾಮಿ ಅವರ ಬಗ್ಗೆ ಈಗ ಲಘುವಾಗಿ ಮಾತನಾಡಿದ್ದಾರೆ. ಜನಪ್ರತಿನಿಧಿಗಳು ಹೀಗೆ ಬಾಯಿಗೆ ಬಂದಂತೆ ಮಾತನಾಡಿ ವಿವಾದ ಸೃಷ್ಟಿಸಿ, ಆಮೇಲೆ ವಿಷಾದಿಸುವುದು ರೂಢಿಯಂತಾಗಿದೆ.
ನಿತ್ಯವೂ ಸಾಮಾಜಿಕ ಹೋರಾಟಗಳಲ್ಲಿ ಪಾಲ್ಗೊಂಡು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಬದುಕುತ್ತಿರುವ ದೊರೆಸ್ವಾಮಿ ಅವರನ್ನು ಟೀಕಿಸಿರುವ ಯತ್ನಾಳ ಅವರ ವಿರುದ್ಧ ಪಕ್ಷವು ಕ್ರಮ ಕೈಗೊಳ್ಳಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯವನ್ನೇ ಹತ್ತಿಕ್ಕುವ ಇಂತಹವರ ಮನಃಸ್ಥಿತಿಯನ್ನು ನೋಡಿದರೆ ಆತಂಕವಾಗುತ್ತದೆ.
ಡಾ. ಶಿವರಾಜ್ ಬ್ಯಾಡರಹಳ್ಳಿ,ಬೆಂಗಳೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.