ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ. ಮಂದಿರ ನಿರ್ಮಾಣದ ಜತೆಜತೆಗೇ ಈ ಸವಿನೆನಪಿನ ಜಂಗಮ ಸ್ವರೂಪಿಗಳಾದ ವಾಲ್ಮೀಕಿ ರಾಮಾಯಣ ಮೊದಲುಗೊಂಡು ತುಳಸಿ ರಾಮಾಯಣ, ಕಂಬ ರಾಮಾಯಣ, ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಮುಂತಾಗಿ ದೇಶದ ನೂರಾರು ರಾಮಾಯಣ ಕಾವ್ಯಗಳನ್ನು ಸಂಪಾದಿಸಿ ಹಾಗೂ ವಿವಿಧ ದೇಶಭಾಷೆಗಳಿಗೆ ತರ್ಜುಮೆ ಮಾಡಿ ಸುಲಭ ಬೆಲೆಗೆ ಸಿಗುವಂತೆ ಪ್ರಕಟಿಸಬೇಕು.
ಇದಕ್ಕಾಗಿ ರಾಮಜನ್ಮಭೂಮಿ ಟ್ರಸ್ಟ್ ಅಧೀನದಲ್ಲಿ ಒಂದು ಪೀಠವನ್ನು ಸ್ಥಾಪಿಸಬಹುದು. ಈ ದಿಸೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಟ್ರಸ್ಟ್ ಕಾರ್ಯಪ್ರವೃತ್ತವಾಗಬೇಕು.
-ಪ್ರೊ. ಶಿವರಾಮಯ್ಯ, ಬೆಂಗಳೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.