
ಪ್ರಜಾವಾಣಿ ವಾರ್ತೆ‘ಇಐಎ ಕರಡಿಗೆ ಎಲ್ಲೆಲ್ಲೂ ಕೆಂಬಾವುಟ' ಎಂಬ ಲೇಖನದಲ್ಲಿ ನಾಗೇಶ ಹೆಗಡೆಯವರು ಬರೆದಿರುವ ವಿಚಾರಗಳು (ಪ್ರ.ವಾ., ಆ. 13) ಪರಿಸರ ಸಂರಕ್ಷಣೆಯ ಕುರಿತು ಕಾನೂನು ರೂಪಿಸುವವರು ಓದಲೇಬೇಕಾದಂತಹವು. ಭಾರತದಂಥ ಅಭಿವೃದ್ಧಿಶೀಲ ರಾಷ್ಟ್ರವೊಂದು ಯಾವುದೇ ಅಭಿವೃದ್ಧಿ ಯೋಜನೆಯನ್ನು ಕೈಗೊಳ್ಳುವ ಮೊದಲು ಪರಿಸರ ಸಂರಕ್ಷಣೆಗೆ ಏನೆಲ್ಲಾ ಎಚ್ಚರಿಕೆ ವಹಿಸಬೇಕು ಎಂಬ ಬಗ್ಗೆ ಬಹಳ ಹಿಂದೆಯೇ ಮಾರ್ಗಸೂಚಿಗಳನ್ನುಹಾಕಿಕೊಂಡಿದ್ದರೂ ಅವು ಕಡತದಲ್ಲಿಯೇ ಉಳಿದಿರುವುದು ವಿಪರ್ಯಾಸ. ಅಭಿವೃದ್ಧಿಯ ಹೆಸರಿನಲ್ಲಿ ಪರಿಸರ ಸಂರಕ್ಷಣಾ ಸೂತ್ರಗಳನ್ನು ಗಾಳಿಗೆ ತೂರುವ ಪರಿಪಾಟ ನಿಲ್ಲಬೇಕು.
-ಮಂಜುನಾಥ್ ಟಿ.ಎಸ್., ತರುವೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.