ADVERTISEMENT

ಉದ್ಯೋಗಾವಕಾಶ ಕಲ್ಪಿಸಲಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 4 ಫೆಬ್ರುವರಿ 2020, 14:33 IST
Last Updated 4 ಫೆಬ್ರುವರಿ 2020, 14:33 IST

ಹರಿಹರದ ಯೋಧ ಜಾವಿದ್ ವೀರಮರಣವನ್ನಪ್ಪಿ ಎರಡು ವರ್ಷಗಳಾದರೂ ಮೃತ ಯೋಧನ ಪತ್ನಿ ಇನ್ನೂ ಕೆಲಸಕ್ಕಾಗಿ ಅಲೆದಾಡುತ್ತಿರುವುದನ್ನು ಕೇಳಿ ಬೇಸರವಾಯಿತು. ಒಬ್ಬ ಯೋಧ ಹುತಾತ್ಮನಾದ ಸಂದರ್ಭದಲ್ಲಿ ಎಲ್ಲ ಪಕ್ಷಗಳ ರಾಜಕಾರಣಿಗಳೂ ಸ್ಪರ್ಧೆಗಿಳಿದಂತೆ ತಂಡೋಪತಂಡವಾಗಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುತ್ತಾರೆ. ಈ ನೆಪದಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಾರೆ. ರಾಜಕಾರಣಿಗಳು, ಮೊದಲು ಇಂತಹವರ ನೆರವಿಗೆ ಧಾವಿಸಿ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕಾಗಿದೆ. ಅದೇ ನಾವು ಯೋಧರಿಗೆ ಕೊಡುವ ನಿಜವಾದ ಗೌರವ.

ಮುರುಗೇಶ ಡಿ., ದಾವಣಗೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT