ಅರ್ಚಕರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ₹3 ಲಕ್ಷ ಪ್ರೋತ್ಸಾಹಧನ ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಮದುವೆಯ ವಿಷಯದಲ್ಲಿ ಅರ್ಚಕರು ಎದುರಿಸುತ್ತಿರುವ ಸಮಸ್ಯೆಯು ರೈತಾಪಿ ಗಂಡುಮಕ್ಕಳದೂ ಆಗಿದೆ. ವ್ಯವಸಾಯ ಮಾಡಿಕೊಂಡು ಹಳ್ಳಿಯಲ್ಲಿ ನೆಲೆಸಿರುವ ರೈತರಿಗೆ ಹೆಣ್ಣು ಕೊಡಲು ಯಾರೂ ಮುಂದೆ ಬರುತ್ತಿಲ್ಲ. ಎಲ್ಲರಿಗಿಂತಲೂ ಮೊದಲಾಗಿ, ಹಳ್ಳಿಯ ರೈತನೇ ತನ್ನ ಮಗಳನ್ನು ರೈತನಿಗೆ ಮದುವೆ ಮಾಡಲು ಮುಂದೆ ಬರುತ್ತಿಲ್ಲ. ಅದೊಂದು ಲಾಭವಿಲ್ಲದ ಕಸುಬು ಎಂಬುದೇ ಇದಕ್ಕೆ ಕಾರಣ. ಆದ್ದರಿಂದ ರೈತರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೂ ಸರ್ಕಾರ ಪ್ರೋತ್ಸಾಹಧನ ಘೋಷಿಸಬೇಕು.
–ನಾಗರಾಜ್ ಮಾದೇಗೌಡ, ಕನಕಪುರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.