ADVERTISEMENT

ಸಾಂಕ್ರಾಮಿಕ ರೋಗ: ಮುಂಜಾಗ್ರತೆ ಅಗತ್ಯ

​ಪ್ರಜಾವಾಣಿ ವಾರ್ತೆ
Published 3 ಜೂನ್ 2019, 17:08 IST
Last Updated 3 ಜೂನ್ 2019, 17:08 IST

ಮಳೆಗಾಲ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿರುವಂತೆಯೇ, ಕೆಲ ಜಿಲ್ಲೆಗಳಲ್ಲಿ ಈಗಾಗಲೇ ಮಲೇರಿಯಾ, ಡೆಂಗಿ, ಚಿಕೂನ್ ಗುನ್ಯಾದಂತಹ ಮಾರಕ ರೋಗಗಳು ಜನರನ್ನು ಕಾಡತೊಡಗಿವೆ.

ಕಸದ ರಾಶಿ, ತಗ್ಗು ಪ್ರದೇಶಗಳಲ್ಲಿ ನಿಲ್ಲುವ ನೀರು, ಸೊಳ್ಳೆಗಳ ಹಾವಳಿಯು ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಮೂಲ ಕಾರಣವಾಗುತ್ತಿವೆ.

ಜಿಲ್ಲಾ ಆಡಳಿತವು ಮುಂಜಾಗ್ರತಾ ಕ್ರಮವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ, ಮೂಲ ಸೌಕರ್ಯ, ರೋಗಿಗಳಿಗೆ ಉತ್ತಮ ಗುಣಮಟ್ಟದ ಆಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.

ADVERTISEMENT

ಮಾರಕ ಸೊಳ್ಳೆಗಳ ಕಡಿತದಿಂದ ರಕ್ಷಿಸಿಕೊಳ್ಳಲು ಫಾಗಿಂಗ್ ನಡೆಸುವ ಬಗ್ಗೆ ಸ್ಥಳೀಯ ಆಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು. ಪರಿಸರ ಸಂರಕ್ಷಣೆಗೆ ಜನಸಾಮಾನ್ಯರು ಸಹ ಕೈಜೋಡಿಸಿದರೆ ಇಂತಹ ರೋಗಗಳ ನಿಯಂತ್ರಣ ಸಾಧ್ಯ.

ಆದರ್ಶ್ ಶೆಟ್ಟಿ ಉಪ್ಪಿನಂಗಡಿ, ಪುತ್ತೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.