ADVERTISEMENT

ವಾಚಕರ ವಾಣಿ | ಪೂರ್ವಭಾವಿ ಪರೀಕ್ಷೆ: ರಾಜ್ಯ ಭಾಷೆಗಿರಲಿ ಆದ್ಯತೆ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2020, 19:30 IST
Last Updated 28 ಆಗಸ್ಟ್ 2020, 19:30 IST

ದೇಶದ ಉನ್ನತ ಹುದ್ದೆಗಳಾದ ಐಎಎಸ್, ಐಪಿಎಸ್‌ನಂತಹ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ತಮ್ಮ ರಾಜ್ಯದ ಅಧಿಕೃತ ಭಾಷೆಯಲ್ಲಿ ಪೂರ್ವಭಾವಿ ಪರೀಕ್ಷೆ ಬರೆಯಲು ಅವಕಾಶ ಇಲ್ಲದಿರುವುದು ದುರದೃಷ್ಟಕರ. ಪ್ರತೀ ವರ್ಷ ಅಭ್ಯರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡು ಪ್ರತಿಭಟಿಸಿದರೂ ಸರ್ಕಾರ ಸ್ಪಂದಿಸದಿರುವುದು ನೋವಿನ ಸಂಗತಿ.

ಭಾಷೆಯ ಸಮಸ್ಯೆಯಿಂದಾಗಿ ಎಷ್ಟೋ ಪ್ರತಿಭಾವಂತ ಅಭ್ಯರ್ಥಿಗಳು ಪೂರ್ವಭಾವಿ ಪರೀಕ್ಷೆ ಬರೆಯಲು ಹಿಂದೇಟು ಹಾಕುತ್ತಾರೆ. ಸರ್ಕಾರ ಈ ತೊಡಕನ್ನು ಕೂಡಲೇ ಸರಿಪಡಿಸಿ, ಆಯಾ ರಾಜ್ಯ ಭಾಷೆಯಲ್ಲಿ ಪೂರ್ವಭಾವಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು.

-ಜೆ.ಚಂದ್ರಶೇಖರ,ದಾವಣಗೆರೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.