ADVERTISEMENT

ಸಮಾಜದ ಸ್ವಾಸ್ಥ್ಯ ಕದಡದಿರಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 10 ಅಕ್ಟೋಬರ್ 2021, 20:00 IST
Last Updated 10 ಅಕ್ಟೋಬರ್ 2021, 20:00 IST

ಮಾದಕವಸ್ತು ಪ್ರಕರಣಗಳಲ್ಲಿ ಸೆಲೆಬ್ರಿಟಿಗಳು, ಉದ್ಯಮಿಗಳು, ರಾಜಕಾರಣಿಗಳು ಮತ್ತು ಅವರ ಮಕ್ಕಳು, ಸಂಬಂಧಿಕರು ಹೆಚ್ಚಿಗೆ ಸಿಲುಕುತ್ತಿರುವುದು ಕಂಡುಬರುತ್ತಿದೆ. ಇದನ್ನು ನೋಡಿದರೆಬಿಡುವಿಲ್ಲದ ಜೀವನದ ಜಂಜಾಟದ ಮಧ್ಯೆ ತಮ್ಮ ಮಕ್ಕಳಿಗೆ ಒಳ್ಳೆಯ ಆಚಾರ-ವಿಚಾರ, ಸಾಮಾಜಿಕ ಕಳಕಳಿಯ ಅರಿವು ಮೂಡಿಸುವಲ್ಲಿ ಕೆಲವರು ವಿಫಲರಾಗಿದ್ದಾರೆ ಎನಿಸುತ್ತದೆ. ಶ್ರೀಮಂತರ ಮಕ್ಕಳಿಗೆ ಕೇಳಿದಷ್ಟು ಹಣ ಸುಲಭವಾಗಿ ಸಿಗುವುದರಿಂದ ಲೇಟ್‌ನೈಟ್ ಪಾರ್ಟಿ, ಮದ್ಯಸೇವನೆ, ಡ್ರಗ್ಸ್ ಸೇವನೆಯಂತಹ ದುಶ್ಚಟಗಳಿಗೆ ಅವರು ದಾಸರಾಗುವ ಅವಕಾಶಗಳು ಹೆಚ್ಚಿಗೆ ಇರುತ್ತವೆ. ಕೆಲವರು ಕುಡಿದ ಅಮಲಿನಲ್ಲಿ ಅಪಘಾತಗಳಿಗೆ ಕಾರಣರಾಗಿ ಅಮಾಯಕರ ಪ್ರಾಣ ತೆಗೆದಿರುವ, ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡಿರುವ ಅನೇಕ ಉದಾಹರಣೆಗಳಿವೆ. ತಮ್ಮ ಮಕ್ಕಳು ಏನೇ ತಪ್ಪು ಮಾಡಿದರೂ ಸಮರ್ಥಿಸಿಕೊಳ್ಳುವವರಿದ್ದಾರೆ. ಅಂತಹವರು, ಪುತ್ರನ ವಿಷಯದಲ್ಲಿ ನಿರ್ದಾಕ್ಷಿಣ್ಯ ನಿರ್ಧಾರ ಕೈಗೊಂಡ ಹಾಲಿವುಡ್‌ ನಟ ಜಾಕಿಚಾನ್ ಅವರನ್ನು ನೋಡಿ ಕಲಿಯಬೇಕಾಗಿದೆ.

- ಮುರುಗೇಶ ಡಿ.,ದಾವಣಗೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT