ADVERTISEMENT

ಉದ್ಧಟತನದ ವರ್ತನೆಗೆ ತಕ್ಕ ಕ್ರಮ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2019, 20:16 IST
Last Updated 16 ಏಪ್ರಿಲ್ 2019, 20:16 IST

ಉತ್ತರಪ್ರದೇಶದ ರಾಂಪುರ ಲೋಕಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಆಜಂಖಾನ್ ಅವರು ಬಿಜೆಪಿ ಅಭ್ಯರ್ಥಿ ಜಯಪ್ರದಾ ಅವರ ವಿರುದ್ಧ ಚುನಾವಣಾ ಪ್ರಚಾರದಲ್ಲಿ ನೀಡಿರುವ ಹೇಳಿಕೆಯು ಅತ್ಯಂತ ಕೀಳು ಮಟ್ಟದ್ದಾಗಿದೆ. ಇದಕ್ಕೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದರೂ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡು ಕ್ಷಮೆಗೆ ನಿರಾಕರಿಸಿರುವುದು ಅವರ ಉದ್ಧಟತನದ ವರ್ತನೆಯನ್ನು ತೋರುತ್ತದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗವು ಅವರಿಗೆ 72 ತಾಸು ಪ್ರಚಾರ ನಿರ್ಬಂಧ ಹೇರಿರುವುದು ಸೂಕ್ತವಾದ ಕ್ರಮವಾಗಿದೆ.

-ಶ್ರೀನಾಥ ಮರಕುಂಬಿ,ಗಂಗಾವತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT