ADVERTISEMENT

ಯಾವುದು ಮುಖ್ಯ?

ಮಹದೇವಯ್ಯ ಮೂಲೆಪೆಟ್ಲುಮೈಸೂರು
Published 1 ಫೆಬ್ರುವರಿ 2019, 19:01 IST
Last Updated 1 ಫೆಬ್ರುವರಿ 2019, 19:01 IST

‘ರಾಜ್ಯದಲ್ಲಿ ಸಂಪೂರ್ಣ ಪಾನ ನಿಷೇಧ ಸಾಧ್ಯವಿಲ್ಲ, ಇದು ಸರ್ಕಾರಕ್ಕೆ ಅತಿ ಹೆಚ್ಚು ಆದಾಯದ ಮೂಲ’ ಎಂದು ಮದ್ಯ ನಿಷೇಧಕ್ಕೆ ಆಗ್ರಹಿಸಿ ವಿವಿಧ ಜಿಲ್ಲೆಗಳಿಂದ ರಾಜಧಾನಿಗೆ ಬಂದಿದ್ದ ಮಹಿಳೆಯರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿರುವುದು ವಿಷಾದನೀಯ.

ಮದ್ಯ ಮಾರಾಟದಿಂದ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ರೂಪದಲ್ಲಿ ಸಾವಿರಾರು ಕೋಟಿ ರೂಪಾಯಿ ಆದಾಯ ಬರುವುದು ಮುಖ್ಯವೋ ಕುಡಿತದಿಂದ ಲಕ್ಷಾಂತರ ಜನಸಾಮಾನ್ಯರ ಸಾವು ನೋವು ಆಗದಂತೆ ಮತ್ತು ಅವರ ಕುಟುಂಬಗಳು ಬೀದಿಗೆ ಬರದಂತೆ ತಡೆಯುವುದು ಮುಖ್ಯವೋ? ಜನನಾಯಕರು ಕರ್ತವ್ಯಪ್ರಜ್ಞೆ ಮತ್ತು ಹೊಣೆಗಾರಿಕೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಚಿಂತಿಸಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT