ADVERTISEMENT

ಮೂಲ ಉದ್ದೇಶ ಮರೆತರೇ?

​ಪ್ರಜಾವಾಣಿ ವಾರ್ತೆ
Published 6 ಜನವರಿ 2020, 18:24 IST
Last Updated 6 ಜನವರಿ 2020, 18:24 IST

ಕಲಬುರ್ಗಿಯಲ್ಲಿ ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಪರಿಷತ್‌ ವತಿಯಿಂದ ಒಂದೂ ಪುಸ್ತಕ ಬಿಡುಗಡೆಯಾಗುವುದಿಲ್ಲ ಎಂದು ವರದಿಯಾಗಿದೆ. ಇದನ್ನು ತಿಳಿದು ವಿಷಾದವಾಯಿತು. ಸಾಹಿತ್ಯ ಪರಿಷತ್ತಿನ ಮೂಲ ಉದ್ದೇಶಗಳಲ್ಲಿ ಪುಸ್ತಕ ಪ್ರಕಟಣೆಯೂ ಒಂದು. ಗುಣಮಟ್ಟದ ಪುಸ್ತಕ ಪ್ರಕಟಣೆಯಿಂದ ಪರಿಷತ್ತಿಗೆ ಲಾಭವಾಗುವುದರಲ್ಲಿ ಸಂದೇಹವಿಲ್ಲ. ಈ ಬಾರಿಯ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆಯೇ ಇಲ್ಲವೆಂದಾದರೆ, ಸಮ್ಮೇಳನ ನಡೆಸುವುದರಲ್ಲಿ ಅರ್ಥವಿಲ್ಲ ಎನಿಸುತ್ತದೆ.

-ಪ್ರಕಾಶ ಗಿರಿಮಲ್ಲನವರ, ಬೆಳಗಾವಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT