ರಾಜ್ಯ ಸರ್ಕಾರವು ಟಿಪ್ಪು ಜಯಂತಿ ಆಚರಣೆ ರದ್ದು ಮಾಡಿರುವುದು ಸ್ವಾಗತಾರ್ಹ. ಆದರೆ ಗಾಂಧೀಜಿ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿಗಳನ್ನು ಸರ್ಕಾರವೇ ಆಚರಿಸಲಿ.
ಈ ಇಬ್ಬರೂ ದೇಶದ ಎರಡು ಕಣ್ಣುಗಳಿದ್ದಂತೆ. ಸರ್ಕಾರದ ವತಿಯಿಂದ ಇವರ ಜಯಂತಿ ಆಚರಿಸುವುದಕ್ಕೆ ಯಾವ ಸಮುದಾಯದ ವಿರೋಧವೂ ಇರಲಾರದು. ನಮ್ಮ ಸರ್ಕಾರಗಳು ಅಭಿವೃದ್ಧಿ ಕಡೆ ಗಮನ ಕೊಡಬೇಕು. ಅದುಬಿಟ್ಟು, ಅಭಿವೃದ್ಧಿಗೆ ಪೂರಕವಲ್ಲದ ಜಯಂತಿ ಆಚರಣೆಗಳಲ್ಲಿ ಕಾಲಹರಣ ಮಾಡುವುದು ಸರಿಯಲ್ಲ.
-ಭೀಮಾಶಂಕರ ಹಳಿಸಗರ, ಶಹಾಪುರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.