ADVERTISEMENT

‘ಸಂಸದರ ನಿಧಿ’ ಯೋಜನೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2018, 20:28 IST
Last Updated 7 ನವೆಂಬರ್ 2018, 20:28 IST

1993ರಲ್ಲಿ ಆರಂಭವಾದ ಸಂಸದರ ಕ್ಷೇತ್ರಾಭಿವೃದ್ಧಿ ನಿಧಿಯ ಬಳಕೆಗೆ ಸಂಬಂಧಿಸಿದಂತೆ ಯಾವುದೇ ಕಾನೂನು ಇಲ್ಲದಿರುವ ಕಾರಣ ಈ ಯೋಜನೆಯ ಅನುಷ್ಠಾನದಲ್ಲಿ ಉತ್ತರದಾಯಿತ್ವ ಮತ್ತು ಪಾರದರ್ಶಕತೆಯ ಕೊರತೆ ಎದ್ದು ಕಾಣುತ್ತದೆ. ಈ ಯೋಜನೆಯ ವಿಚಾರವಾಗಿ ಸಂಸದರ ಮೇಲೆ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ನಿಯಮಗಳ ಉಲ್ಲಂಘನೆಯ ಆರೋಪಗಳು ಕೇಳಿಬರುತ್ತಿವೆ.

ಸಂಸದರು ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಪ್ರತಿವರ್ಷ ಐದು ಕೋಟಿ ರೂಪಾಯಿ ನೀಡಲಾಗುತ್ತದೆ. ಈ ಮೊತ್ತವನ್ನು ₹ 25 ಕೋಟಿಗೆ ಹೆಚ್ಚಿಸುವ ಬೇಡಿಕೆಯನ್ನು ಕೆಲವು ಸಂಸದರು ಇಟ್ಟಿದ್ದಾರೆ. ಮೊತ್ತ ಎಷ್ಟೇ ಇರಲಿ, ಸಾರ್ವಜನಿಕರ ಹಣ ಪೋಲಾಗದಂತೆ ನೋಡಿಕೊಳ್ಳುವುದು ಮುಖ್ಯ.

-ಪ್ರೊ. ಆರ್.ವಿ. ಹೊರಡಿ, ಧಾರವಾಡ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.