ADVERTISEMENT

ಯೋಜನೆಗಳ ಸದುಪಯೋಗ: ಜಾಗೃತಿ ಬೇಕಾಗಿದೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2020, 19:45 IST
Last Updated 10 ಫೆಬ್ರುವರಿ 2020, 19:45 IST

ಸರ್ಕಾರವು ಜನಸಾಮಾನ್ಯರಿಗಾಗಿ ವಿವಿಧ ಯೋಜನೆಗಳನ್ನು ರೂಪಿಸಿದೆಯಾದರೂ ಇವುಗಳಲ್ಲಿ ಕೆಲವು ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಸಾರ್ವಜನಿಕರು ವಿಫಲರಾಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸರ್ಕಾರವೇ ಆಗಿದೆ. ಇಲಾಖೆಯ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಸರ್ಕಾರವು ಹೋಬಳಿ ಮಟ್ಟದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತದೆ. ಆದರೆ ಈ ಕಾರ್ಯಕ್ರಮದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ ಸೇರುತ್ತಾರೆ. ಜೊತೆಗೆ, ಗ್ರಾಮ ಮಟ್ಟದಲ್ಲಿ ಜನರಿಗೆ ಸೂಕ್ತ ಅರಿವು ಮೂಡಿಸುವಲ್ಲಿ ಸರ್ಕಾರ ವಿಫಲಗೊಂಡಿದೆ.

ಪಹಣಿ ತಿದ್ದುಪಡಿ, ಸಂಧ್ಯಾ ಸುರಕ್ಷಾ, ವಿಧವಾ ಪಿಂಚಣಿ, ವೃದ್ಧಾಪ್ಯ ವೇತನದಂತಹ ಯೋಜನೆಗಳ ಸದುಪಯೋಗವನ್ನು ಬಹುತೇಕರು ಮಧ್ಯವರ್ತಿಗಳಿಲ್ಲದೇ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಪ್ರತಿ ಫಲಾನುಭವಿಗೂ ಯೋಜನೆಯ ನೆರವು ದೊರೆಯುವಂತೆ ಆಗಬೇಕು. ಅಧಿಕಾರಿಗಳು ಜನರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು.

-ವಿಜಯ್‌ಕುಮಾರ್ ಎಚ್.ಕೆ., ರಾಯಚೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.