ADVERTISEMENT

ಆಕಾಶವಾಣಿ: ಹಿಂದಿ ಜಾಹೀರಾತು ನಿಲ್ಲಲಿ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2020, 20:00 IST
Last Updated 5 ಮಾರ್ಚ್ 2020, 20:00 IST

ಬೆಂಗಳೂರು ಆಕಾಶವಾಣಿಯು ಗುಣಮಟ್ಟದ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವುದರ ಮೂಲಕ ಅಪಾರ ಜನಮನ್ನಣೆ ಗಳಿಸಿದೆ. ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಅತ್ಯಂತ ಅಚ್ಚುಮೆಚ್ಚಿನ ಪ್ರಬಲ ಮಾಧ್ಯಮವಾಗಿ ಈಗಲೂ ಮುಂಚೂಣಿಯಲ್ಲಿದೆ. ಆದರೆ ಇತ್ತೀಚೆಗೆ ಸರ್ಕಾರಿ ಯೋಜನೆಗಳು, ಆರೋಗ್ಯ ಸೇರಿದಂತೆ ಇತರ ಕೆಲವು ಯೋಜನೆಗಳಿಗೆ ಸಂಬಂಧಿಸಿದ ಜಾಹೀರಾತುಗಳನ್ನು ಹಿಂದಿ ಭಾಷೆಯಲ್ಲಿ ಪ್ರಸಾರ ಮಾಡಲಾಗುತ್ತಿದೆ.

ಇವುಗಳನ್ನು ಯಾರಿಗಾಗಿ ಪ್ರಸಾರ ಮಾಡಲಾಗುತ್ತದೆ ಎಂಬ ಕನಿಷ್ಠ ಪ್ರಜ್ಞೆಯೂ ಆಕಾಶವಾಣಿ ನಿಲಯಕ್ಕೆ ಇದ್ದಂತಿಲ್ಲ. ಆಕಾಶವಾಣಿಯ ಬಹುತೇಕ ಕೇಳುಗರು ಗ್ರಾಮೀಣ ಭಾಗದವರೇ ಆಗಿರುವುದರಿಂದ ಎಲ್ಲಜಾಹೀರಾತುಗಳನ್ನು ಈ ಹಿಂದಿನಂತೆ ಕನ್ನಡದಲ್ಲೇ ಪ್ರಸಾರ ಮಾಡಲು ಕ್ರಮ ಕೈಗೊಳ್ಳಬೇಕು.

-ಯಲುವಹಳ್ಳಿ ಸೊಣ್ಣೇಗೌಡ,ಚಿಕ್ಕಬಳ್ಳಾಪುರ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.