ADVERTISEMENT

ಜಾತಿಯೇ ಪ್ರಧಾನ ಅರ್ಹತೆ ಆಗದಿರಲಿ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2019, 20:15 IST
Last Updated 5 ಡಿಸೆಂಬರ್ 2019, 20:15 IST

‘ದಲಿತ ಎಂಬ ಕಾರಣಕ್ಕೆ ನನಗೆ ಮುಖ್ಯಮಂತ್ರಿ ಪಟ್ಟ ಬೇಡ’ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ (ಪ್ರ.ವಾ., ಡಿ. 5). ನಿಜ, ಅವರು ಹೇಳಿದಂತೆ ಜಾತಿ, ಮತದ ಕಾರಣಕ್ಕೆ ಮುಖ್ಯಮಂತ್ರಿ ಪಟ್ಟ ಮಾತ್ರವಲ್ಲ ಯಾವುದೇ ರಾಜಕೀಯ ಅಧಿಕಾರ ಪಟ್ಟವೂ ದೊರಕಬಾರದು. ಜಾತಿ, ಧರ್ಮ ಯಾವುದೇ ಇದ್ದರೂ ನಿಜವಾದ ಸಮಾಜಸೇವೆ ಮಾಡುವಂತಹವರಿಗೆ ಆದ್ಯತೆ ನೀಡಬೇಕು. ಆದರೆ ಪ್ರತಿಯೊಂದು ವಿಚಾರದಲ್ಲೂ ಜಾತಿಯೇ ಪ್ರಧಾನ ಅರ್ಹತೆ ಆಗಿರುವುದು ದುರಂತ. ಈ ವಿಧಾನ ಇನ್ನು ಮುಂದಾದರೂ ಬದಲಾಗಲಿ.

-ಪತ್ತಂಗಿ ಎಸ್. ಮುರಳಿ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT