ADVERTISEMENT

ವಾಚಕರ ವಾಣಿ | ‍ಪಠ್ಯಕ್ರಮ ಪರಿಷ್ಕರಣೆ: ಪುನರ್‌ಪರಿಶೀಲಿಸಿ

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 15:58 IST
Last Updated 13 ಜುಲೈ 2020, 15:58 IST

ಕೋವಿಡ್‌- 19ರ ಹಿನ್ನೆಲೆಯಲ್ಲಿ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 9ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ತನ್ನ ಪಠ್ಯಕ್ರಮವನ್ನು ಪರಿಷ್ಕರಿಸಿದೆ.

ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಶೈಕ್ಷಣಿಕ ವರ್ಷವನ್ನು ಸರಿದೂಗಿಸಬೇಕಾದ ಅಗತ್ಯವಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಸ್ವಾಗತಾರ್ಹ. ಆದರೆ, ಪ್ರಮುಖವಾಗಿ 11ನೇ ತರಗತಿಯ ರಾಜಕೀಯ ವಿಜ್ಞಾನ ಪಠ್ಯಕ್ರಮದಿಂದ ಒಕ್ಕೂಟ ವ್ಯವಸ್ಥೆ, ಪೌರತ್ವ, ರಾಷ್ಟ್ರೀಯತೆ ಮತ್ತು ಜಾತ್ಯತೀತತೆಯಂತಹ ವಿಷಯಗಳನ್ನು ಕೈಬಿಟ್ಟಿರುವುದನ್ನು ಪುನರ್‌ಪರಿಶೀಲಿಸಬೇಕಾದ ಅನಿವಾರ್ಯ ಇದೆ.

ಏಕೆಂದರೆ ಒಕ್ಕೂಟ ವ್ಯವಸ್ಥೆ, ಜಾತ್ಯತೀತ ಮತ್ತು ಪ್ರಜಾಪ್ರಭುತ್ವದ ಬೇರುಗಳು ಭಾರತವನ್ನು ವೈವಿಧ್ಯಮಯ130 ಕೋಟಿ ಜನಸಂಖ್ಯೆಯ ಅಖಂಡ ರಾಷ್ಟ್ರವಾಗಿ ಮುಂದುವರಿಸಿಕೊಂಡು ಹೋಗುತ್ತಿವೆ. ಇಂದಿನ ಮಕ್ಕಳು ಮುಂದಿನ ಪ್ರಜೆಗಳಾದ್ದರಿಂದ ಅವರಿಗೆ ಇಂತಹ ಪರಿಕಲ್ಪನೆಗಳನ್ನು ತಿಳಿಸವಲ್ಲಿ ಶಿಕ್ಷಣದ ಪಾತ್ರ ಅತ್ಯಂತ ಮಹತ್ವದಾಗಿದೆ.
-ಪ್ರವೀಣ ನಾಗಪ್ಪ ಯಲವಿಗಿ,ಹಾವೇರಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.