ADVERTISEMENT

ವಾಚಕರ ವಾಣಿ: ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಪುನರಾರಂಭಕ್ಕೆ ಸಕಾಲ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2021, 20:27 IST
Last Updated 23 ಸೆಪ್ಟೆಂಬರ್ 2021, 20:27 IST

ಕೋವಿಡ್ ಕಾರಣದಿಂದ ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ ಯೋಜನೆ ಸ್ಥಗಿತವಾಗಿತ್ತು. ಸಂಕಷ್ಟ ಕಾಲದಲ್ಲಿ ಸರ್ಕಾರವು ಮಕ್ಕಳಿಗೆ ಸಲ್ಲಬೇಕಾದ ಆಹಾರ ಪದಾರ್ಥವನ್ನು ಅವರ ಮನೆಗೆ ತಲುಪಿಸುತ್ತಿರುವುದು ಶ್ಲಾಘನೀಯ.

ಆದರೆ ಇನ್ನೂ ಅದೇ ಮಾರ್ಗವನ್ನು ಅನುಸರಿಸಿದರೆ ಅಕ್ಷರ ದಾಸೋಹ ಕಾರ್ಯಕ್ರಮದ ನೈಜ ಕಳಕಳಿಯನ್ನು ಮರೆತಂತಾಗುತ್ತದೆ. ಶಾಲೆಗಳಲ್ಲಿ ಬಿಸಿಯೂಟ ಯೋಜನೆಯನ್ನು ಪುನರಾರಂಭ ಮಾಡುವುದಕ್ಕೆ ತಡಮಾಡದಿರುವುದು ಲೇಸು. ಬಿಸಿಯೂಟ ಪುನಃ ಆರಂಭಿಸಿದರೆ ಲಕ್ಷಾಂತರ ಬಡ ಮಕ್ಕಳಿಗೆ ಅನುಕೂಲವಾಗುತ್ತದೆ.
-ಸರೋಜಿ ನಾಯಕ್,ಹೊಸನಗರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT