ಇಂದಿರಾ ಕ್ಯಾಂಟೀನ್ನಲ್ಲಿ ಉಚಿತ ಊಟದ ವ್ಯವಸ್ಥೆಯನ್ನು ಸರ್ಕಾರ ರದ್ದು ಮಾಡಿರುವುದು ಸರಿಯಲ್ಲ. ಲಾಕ್ಡೌನ್ನಿಂದಾಗಿ ಬಡವರು ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಇಲ್ಲಿಗೆ ಬರುವವರಲ್ಲಿ ಹೆಚ್ಚಿನವರು ಕೂಲಿ ಕಾರ್ಮಿಕರು, ಪೌರ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಆಟೊ ಚಾಲಕರು, ಹೊರ ರಾಜ್ಯದಿಂದ ಬಂದ ಕಾರ್ಮಿಕರು ಹಾಗೂ ಬಡವರು. ಈ ಎಲ್ಲರ ಹಸಿವನ್ನು ಇಂದಿರಾ ಕ್ಯಾಂಟೀನ್ ನೀಗಿಸುತ್ತಿದೆ. ಹೀಗಾಗಿ ಸರ್ಕಾರ ತನ್ನ ಆದೇಶವನ್ನು ಹಿಂಪಡೆದು, ಲಾಕ್ಡೌನ್ ಮುಗಿಯುವವರೆಗೂ ಬಡವರ ಹೊಟ್ಟೆ ತುಂಬಿಸಲಿ.
-ನಬಿಸಾಬ್ ಆರ್.ಬಿ. ದೋಟಿಹಾಳ,ಕೊಪ್ಪಳ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.