ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿವಿಧ ಕೋರ್ಸ್ಗಳಿಗೆ 2018–19ರ ಸಾಲಿಗೆ ಯುಜಿಸಿಯಿಂದ ಮಾನ್ಯತೆ ಸಿಕ್ಕಿದೆ. ಆದರೆ, 2012 ರಿಂದ 2016ರ ಅವಧಿಯಲ್ಲಿ ಈ ವಿಶ್ವವಿದ್ಯಾಲಯದಲ್ಲಿ ಪದವಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳು ಅತಂತ್ರರಾಗಿಯೇ ಉಳಿದಿದ್ದಾರೆ.
ವಿಶ್ವವಿದ್ಯಾಲಯದ ಮಾನ್ಯತೆಯನ್ನು ರದ್ದು ಮಾಡಿದ ಯುಜಿಸಿ ಕ್ರಮ, ಸುಮಾರು 95 ಸಾವಿರ ವಿದ್ಯಾರ್ಥಿಗಳ ಭವಿಷ್ಯವನ್ನು ಅತಂತ್ರಗೊಳಿಸಿದೆ. ವಿಶ್ವವಿದ್ಯಾಲಯದ ವಿವಿಧ ಕೋರ್ಸ್ಗಳಿಗೆ ಈ ವರ್ಷ ಮಾನ್ಯತೆ ಸಿಕ್ಕಿದ ಕಾರಣಕ್ಕೆ ಸಿಬ್ಬಂದಿ ಈಗ ಸಂಭ್ರಮಿಸುತ್ತಿದ್ದಾರೆ. ಆದರೆ 95 ಸಾವಿರ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆಯೂ ಚಿಂತಿಸಬೇಕಾದ್ದು ಅಗತ್ಯವಲ್ಲವೇ?
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.