ADVERTISEMENT

ವಾಚಕರವಾಣಿ | ಪರೀಕ್ಷೆಗೆ ಮುನ್ನ ಉತ್ತರ ಕಂಡುಕೊಳ್ಳಬೇಕು!

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 19:30 IST
Last Updated 12 ಜುಲೈ 2020, 19:30 IST

ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ತರಗತಿಗಳಲ್ಲಿ ಮಧ್ಯಂತರ ಸೆಮಿಸ್ಟರ್ ಪರೀಕ್ಷೆಗಳನ್ನು ಈ ವರ್ಷ ರದ್ದುಪಡಿಸಿರುವುದು ಸ್ವಾಗತಾರ್ಹ. ಆದರೆ ಅಂತಿಮ ಸೆಮಿಸ್ಟರ್‌ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಾಗಿ ಉನ್ನತ ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ.

‘ಪರೀಕ್ಷೆಯಿಂದಲೇ ಭವಿಷ್ಯ’ ಎಂಬಂತೆ ಕಂಪನಿಗಳು ಉದ್ಯೋಗ ನೀಡಲು ವಿದ್ಯಾರ್ಥಿಗಳ ಪರೀಕ್ಷೆಯ ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳುತ್ತವೆ ಎಂಬುದು ಸಚಿವರ ಮಾತು. ಆದರೆ ಲಾಕ್‌ಡೌನ್ ಆದಂತಹ ಸಂದರ್ಭದಲ್ಲಿ ಆನ್‌ಲೈನ್‌ನಲ್ಲಿ ತರಗತಿಗಳು ನಡೆದಿವೆ. ಈ ತರಗತಿಗಳು ಎಷ್ಟು ಮೌಲ್ಯಯುತವಾಗಿದ್ದವು ಹಾಗೂ ಪಾರದರ್ಶಕತೆಯಿಂದ ಕೂಡಿದ್ದವು, ಆನ್‌ಲೈನ್‌ನಲ್ಲಿ ಮಾಡಿದ ಪಾಠಗಳು ವಿದ್ಯಾರ್ಥಿಗಳಿಗೆ ನಿಜಕ್ಕೂ ಅರ್ಥವಾಗಿವೆಯೇ ಎಂಬಂತಹ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕಾಗಿದೆ.

ಪರೀಕ್ಷೆಗೆ ಮೊದಲು ಕೆಲವು ದಿನ ಕಾಲೇಜುಗಳಲ್ಲಿ ತರಗತಿಗಳನ್ನು ನಡೆಸುವುದಾಗಿ ಹೇಳಲಾಗಿತ್ತು. ಆದರೆ ಈಗ ಅದನ್ನುಕೈ ಬಿಡಲಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣ ಪೂರ್ಣ ಪ್ರಮಾಣದಲ್ಲಿ ತಲುಪಿಲ್ಲ, ಓದಲು ಸರಿಯಾದ ಪುಸ್ತಕಗಳಿಲ್ಲ. ಎಲ್ಲದಕ್ಕೂ ಇಂಟರ್ನೆಟ್ ಅನ್ನೇ ಅವಲಂಬಿಸಬೇಕು. ಹೀಗಾಗಿ ಯಾವ ಆಧಾರದ ಮೇಲೆ ಪರೀಕ್ಷೆ ಬರೆಯುವುದು? ಪರೀಕ್ಷೆ ಅಲ್ಲದೆ ಅಂತಿಮ ವರ್ಷದ ಇನ್ನಿತರ ಶೈಕ್ಷಣಿಕ ಚಟುವಟಿಕೆಗಳಾದ ಪ್ರಾಜೆಕ್ಟ್‌, ಅಸೈನ್‌ಮೆಂಟ್‌, ಡೆಸರ್ಟೇಷನ್‌ಗಳನ್ನು ಕಡ್ಡಾಯವಾಗಿ ಮಾಡಲೇಬೇಕು ಎಂದು ಪ್ರೊಫೆಸರ್‌ಗಳು ಹೇಳಿದ್ದಾರೆ. ಕೊರೊನಾ ಸೋಂಕಿನ ಆತಂಕದ ಈ ದಿನಗಳಲ್ಲಿ ಇವನ್ನೆಲ್ಲಾ ಮಾಡುವುದು ಹೇಗೆ ಸಾಧ್ಯ?

ADVERTISEMENT

ವಿದ್ಯಾರ್ಥಿಗಳ ಇಂತಹ ಸಮಸ್ಯೆಗಳನ್ನು ಅರಿತು, ಅವರ ಅಭಿಪ್ರಾಯಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರಕ್ಕೆ ಬರುವುದು ಒಳಿತು.

-ನವೀನ್ ಕೊಡವತ್ತಿ,ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.