
ಪ್ರಜಾವಾಣಿ ವಾರ್ತೆಜನರು ಗುಳೆ ಹೋಗದಂತೆ ತಡೆಯುವುದು, ಕುಡಿಯುವ ನೀರು ಪೂರೈಕೆ, ಜಾನುವಾರುಗಳಿಗೆ ಮೇವು ಒದಗಿಸುವ ನಿರ್ಣಯವನ್ನು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವುದು(ಪ್ರ.ವಾ., ಮೇ 10) ಸೂಕ್ತವಾಗಿದೆ. ರಾಜ್ಯದಲ್ಲಿ ಬರದ ಛಾಯೆ ಮೂಡಿ ನೀರಿಗೆ ತತ್ವಾರ ಉಂಟಾಗಿದೆ.
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಿಂದ ವಿಳಂಬವಾದರೂ, ಬರ ನಿರ್ವಹಣೆ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳಲು ಸಚಿವಾಲಯವು ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಸದ್ಯಕ್ಕೆ ಗ್ರಾಮೀಣ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಬಿಡುಗಡೆ ಆಗಿರುವ ಹಣವನ್ನು ಸೂಕ್ತವಾಗಿ ಬಳಸಿಕೊಂಡು, ಜನ, ಜಾನುವಾರುಗಳ ಬರದ ಸಂಕಷ್ಟ ನೀಗಿಸಬೇಕಾಗಿದೆ.
- ಶ್ರೀನಾಥ ಮರಕುಂಬಿ, ಗಂಗಾವತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.