ಮೊರಾರ್ಜಿ ದೇಸಾಯಿ ಅವರು ದೇಶದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಬೆಳಗಾವಿಗೆ ಭೇಟಿ ನೀಡಿದ್ದರು. ವಿಮಾನ ನಿಲ್ದಾಣದಲ್ಲಿ ಬೆಳಗಾವಿ ಗಡಿ ವಿವಾದದ ಬಗ್ಗೆ ಪತ್ರಕರ್ತರು ಪ್ರಶ್ನೆ ಕೇಳಿದಾಗ ಅವರು ‘ಎಲ್ಲಿದೆ ಸಮಸ್ಯೆ? ಅದು ಮುಗಿದ ಅಧ್ಯಾಯ’ ಎಂದು ಹೇಳುವ ದಿಟ್ಟತನ ಮೆರೆದರು. ಇಂಥದ್ದೇ ಒಂದು ನಿರ್ಧಾರ ಸುಪ್ರಿಂ ಕೋರ್ಟ್ನಿಂದ ಬಂದರೆ ಗಡಿನಾಡಿನ ಜನ ನೆಮ್ಮದಿಯಿಂದ ಬದುಕಬಲ್ಲರು.
ಜಯವಂತ ಕಾಡದೇವರ,ಬನಹಟ್ಟಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.