ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ವಿವಾದ ಸೃಷ್ಟಿಸುವುದರಲ್ಲಿ ನಿಸ್ಸೀಮರು. ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಅವರು ಸಕ್ರಿಯ ರಾಜಕಾರಣಕ್ಕೆ ಬರುವುದು ಒಳಿತು. ‘ಗುಜರಾತ್ ಮತ್ತು ರಾಜಸ್ಥಾನದವರು ಒಂದು ವೇಳೆ ಮುಂಬೈ ಹಾಗೂ ಠಾಣೆ ನಗರಗಳಿಂದ ಹೊರನಡೆದರೆ, ಈ ನಗರಗಳಲ್ಲಿ ದುಡ್ಡೇ ಇರುವುದಿಲ್ಲ’ ಎಂದು ಹೇಳುವ ಮೂಲಕ ಈಗ ಅವರು ವಿವಾದದ ಕಿಡಿ ಹತ್ತಿಸಿದ್ದಾರೆ. ಈ ಹಿಂದೆ, ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವನ್ನು ಕಾಡುತ್ತಿದ್ದ ಅವರು, ಈಗ ಶಿಂದೆ ನೇತೃತ್ವದ ಸರ್ಕಾರಕ್ಕೆ ಇರಿಸುಮುರಿಸು ತಂದಿದ್ದಾರೆ.
- ಅನಿಲ್ ನಾಯ್ಕ, ಹೊನ್ನಾವರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.