ADVERTISEMENT

ವಾಚಕರ ವಾಣಿ | ಶೀಘ್ರ ಪೂರ್ಣಗೊಳ್ಳಲಿ ನೇಮಕಾತಿ ಪ್ರಕ್ರಿಯೆ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 14 ಜೂನ್ 2022, 20:00 IST
Last Updated 14 ಜೂನ್ 2022, 20:00 IST

ದೇಶದಲ್ಲಿ ಒಂದೂವರೆ ವರ್ಷದಲ್ಲಿ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 10 ಲಕ್ಷ ಜನರನ್ನು ನೇಮಕ ಮಾಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಸೂಚಿಸಿರುವುದು ನಿರುದ್ಯೋಗಿ ಯುವಜನರು ತುಸು ನಿಟ್ಟುಸಿರು ಬಿಡುವಂತಹ ವಿಷಯ. ನಿರುದ್ಯೋಗದ ಸಮಸ್ಯೆ ಹೆಚ್ಚಾಗಿದೆ. ಆದರೆ ಕಾಲಕಾಲಕ್ಕೆ ನೇಮಕಾತಿಗಳು ನಡೆಯದ ಕಾರಣ ಉದ್ಯೋಗ ಆಕಾಂಕ್ಷಿಗಳಿಗೆ ಬಹಳ ನಿರಾಸೆ‌ಯಾಗಿದೆ. ನೇಮಕಾತಿಗಾಗಿ ಅರ್ಜಿ ಸಲ್ಲಿಸಿ, ಪರೀಕ್ಷೆ ನಡೆದು ಆಯ್ಕೆ ಪ್ರಕ್ರಿಯೆ ಸಂಪೂರ್ಣ ಮುಗಿಯುವ ವೇಳೆಗೆ ಮೂರರಿಂದ ನಾಲ್ಕು ವರ್ಷಗಳೇ ಕಳೆದಿರುತ್ತವೆ. ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಪೂರ್ಣಗೊಳ್ಳುವುದು ಎಲ್ಲ ದೃಷ್ಟಿಯಿಂದಲೂ ಒಳಿತು.

-ಚೆಲುವರಾಜು ಕೆ. ಧನಗೆರೆ,ಕೊಳ್ಳೇಗಾಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT