ADVERTISEMENT

ರಿಫ್ಲೆಕ್ಟರ್‌ ಅಳವಡಿಸಿ, ಜೀವ ಉಳಿಸಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 21 ನವೆಂಬರ್ 2019, 17:57 IST
Last Updated 21 ನವೆಂಬರ್ 2019, 17:57 IST

ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮವಾಗಿ ‘ಪ್ರಜಾವಾಣಿ’ಯ ಹಾವೇರಿ ಜಿಲ್ಲಾ ಹಿರಿಯ ವರದಿಗಾರ
ಎಂ.ಸಿ.ಮಂಜುನಾಥ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ (ಪ್ರ.ವಾ., ನ. 21). ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ಟ್ರ್ಯಾಕ್ಟರ್‌ಗಳಲ್ಲಿ ಹುಲ್ಲು, ಭತ್ತ, ಅಡಿಕೆಗೊನೆ ಮುಂತಾದವನ್ನು ಬೇಕಾಬಿಟ್ಟಿಯಾಗಿ ತುಂಬಲಾಗುತ್ತದೆ. ಟ್ರೇಲರ್‌ ರಿಫ್ಲೆಕ್ಟರ್ ಅಥವಾ ಲೈಟ್ ಇಲ್ಲದಿರುವುದರಿಂದ, ತೀರಾ ಹತ್ತಿರ ಬಂದಾಗಷ್ಟೇ ದ್ವಿಚಕ್ರ ವಾಹನ ಸವಾರರಿಗೆ ಟ್ರೇಲರ್‌ ಗೋಚರಿಸುತ್ತದೆ. ಹೆದ್ದಾರಿಗಳಲ್ಲಿ ಮುಖ್ಯವಾಗಿ ಸಂಜೆ, ರಾತ್ರಿ ವೇಳೆಯಲ್ಲಿ ಇಂತಹ ಕಾರಣಕ್ಕೆ ನಿಯಂತ್ರಣ ತಪ್ಪಿ ಅಪಘಾತಗಳಾಗುವುದು ಹೆಚ್ಚು. ಸಂಚಾರ ಪೊಲೀಸರು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡರೆ ಹಲವರ ಜೀವ ಉಳಿಸಬಹುದು.

ಪೂರ್ಣಿಮಾ ಗುರುದೇವ್ ಭಂಡಾರ್ಕರ್, ಹೊಸನಗರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT