ಆರ್ಥಿಕವಾಗಿ ಹಿಂದುಳಿದಿರುವ ಮೇಲ್ಜಾತಿಯವರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ 10ರಷ್ಟು ಮೀಸಲಾತಿ ನೀಡಲು ಮೋದಿ ನೇತೃತ್ವದ ಸಚಿವ ಸಂಪುಟ ಸಮ್ಮತಿಸಿರುವುದು ಸ್ವಾಗತಾರ್ಹ ನಿರ್ಧಾರ. ಇದು ಬಹಳ ದಿನಗಳ ಬೇಡಿಕೆಯಾಗಿತ್ತು.
ಬಡತನ ಎಂಬುದು ಯಾವುದೋ ಒಂದೆರಡು ಜಾತಿಗಳಿಗೆ ಸೀಮಿತವಾದುದಲ್ಲ. ಎಲ್ಲ ಜಾತಿಗಳಲ್ಲೂ ಬಡವರಿದ್ದಾರೆ. ಅವರನ್ನು ಮೇಲೆತ್ತುವ ಹೊಣೆಗಾರಿಕೆಯೂ ಸರ್ಕಾರದ ಮೇಲಿದೆ. ಜಾತಿಯಿಂದ ಮೇಲಿನ ಸ್ತರದಲ್ಲಿದ್ದರೂ ಆರ್ಥಿಕವಾಗಿ ಹಿಂದುಳಿದ ಬಡವರಿಗೆ ಈ ನಿರ್ಧಾರದಿಂದ ಒಳಿತಾಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.