ADVERTISEMENT

ವಾಚಕರ ವಾಣಿ: ಬಯಲಾಗಲಿ ಜಾತಿಗಣತಿ ಸಮೀಕ್ಷೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 19:30 IST
Last Updated 23 ಸೆಪ್ಟೆಂಬರ್ 2020, 19:30 IST

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯು (ಜಾತಿಗಣತಿ) ಇನ್ನೂ ಸರ್ಕಾರದ ಕೈ ಸೇರಿಲ್ಲ ಎಂದು ಸಚಿವ ಬಿ. ಶ್ರೀರಾಮುಲು ವಿಧಾನಪರಿಷತ್ತಿನಲ್ಲಿ ಹೇಳಿದ್ದಾರೆ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಡೆಸಿದಂತಹ ಸಮೀಕ್ಷೆಯು ಹಲವಾರು ವರ್ಷಗಳಾದರೂ ಇನ್ನೂ ಸರ್ಕಾರಕ್ಕೆ ತಲುಪಿಲ್ಲ ಎಂದರೆ ಏನರ್ಥ? ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ಸಮೀಕ್ಷೆ ನಡೆಸಲಾಗಿತ್ತು. ನಂತರ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಈಗ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಇಂತಹ ಕಾಟಾಚಾರಕ್ಕೆ ಯಾಕೆ ಸಾರ್ವಜನಿಕರ ಹಣವನ್ನು ಪೋಲು ಮಾಡಿ ಸಮೀಕ್ಷೆ ನಡೆಸಬೇಕಾಗಿತ್ತು?

ಸರ್ಕಾರ ಯಾವ ಕಾರಣಕ್ಕಾಗಿ ಈ ಸಮೀಕ್ಷೆಯನ್ನು ಮಾಡಿಸಿತ್ತು? ಈ ಸಂಬಂಧದ ವರದಿಯನ್ನು ಜನರ ಮುಂದಿಡಲು ಇರುವ ಅಡೆತಡೆಗಳಾದರೂ ಯಾವುವು ಎನ್ನುವುದು ಬಹಿರಂಗವಾಗಬೇಕು. ಜಾತಿಗಣತಿ ಸಮೀಕ್ಷೆಯು ಯಾವುದೇ ಕಾರಣಕ್ಕೂ ಮೂಲೆಗುಂಪಾಗುವಂತೆ ಆಗಬಾರದು.

–ರಾಜು ಬಿ. ಲಕ್ಕಂಪುರ, ಜಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.