ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳು ತಮ್ಮ ತತ್ವ, ಸಿದ್ಧಾಂತಗಳ ಹುಳಿಯನ್ನು ಹಿಂಡಿ, ತಮ್ಮ ಪಕ್ಷಗಳ ಶಾಲುಗಳನ್ನು ಹೊದಿಸಿ ಗ್ರಾಮೀಣ ಭಾಗದ ಜನರಲ್ಲಿ ದ್ವೇಷ ರಾಜಕಾರಣದ ಬೀಜ ಬಿತ್ತುವ ಕಾಯಕ ಶುರು ಮಾಡಿವೆ.
ಈ ಚುನಾವಣೆಯಲ್ಲಿ ಯಾವುದೇ ಪಕ್ಷ ಮೂಗು ತೂರಿಸುವ ಕೆಲಸ ಮಾಡಬಾರದು. ಪ್ರಾಥಮಿಕ ಸಂಬಂಧಗಳೇ ಪ್ರಮುಖವಾಗಿರುವ ಗ್ರಾಮ ಪಂಚಾಯಿತಿ ಚುನಾವಣೆಯ ಪಾವಿತ್ರ್ಯವನ್ನು ಉಳಿಸಲು ರಾಷ್ಟ್ರೀಯ ಪಕ್ಷಗಳು ಅಂತರ ಕಾಯ್ದುಕೊಳ್ಳುವುದು ಅತ್ಯವಶ್ಯಕ.
-ಬಾದಾಮಿ ಭಾಸ್ಕರ ನಾಯಕ,ಬಳ್ಳಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.