ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆಗಳು ವ್ಯವಸ್ಥೆಯ ಬಗ್ಗೆ ಬೇಸರ ಮೂಡಿಸುತ್ತಿವೆ. ಒಬ್ಬ ಹೆಣ್ಣುಮಗಳ ಮಾನಹರಣವೇ (ಸತ್ಯಾಸತ್ಯತೆ ಏನೇ ಇರಲಿ) ರಾಜಕೀಯ ಚರ್ಚೆಗೆ ಗ್ರಾಸವಾಗಿರುವುದು ದುರದೃಷ್ಟಕರ.
ಅದರಲ್ಲೂ ಟಿ.ವಿ.ಯಲ್ಲಿ ಪದೇಪದೇ ಅದೇ ವಿಷಯ ಪ್ರಸ್ತಾಪವಾಗುತ್ತಿರುವುದು, ಸಾಮಾಜಿಕ ಜಾಲತಾಣಗಳಲ್ಲಿ ಧ್ವನಿ ಮತ್ತು ದೃಶ್ಯಗಳು ಯಥಾವತ್ತಾಗಿ ವಿನಿಮಯವಾಗುತ್ತಿರುವುದು ನಾಗರಿಕ ಸಮಾಜಕ್ಕೆ ಶೋಭೆಯಲ್ಲ. ಇಂತಹ ದೃಶ್ಯಾವಳಿಗಳು ಯುವಜನರ ಮನಸ್ಸುಗಳ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಯೋಚಿಸಿದರೆ ಮನಸ್ಸು ಕಸಿವಿಸಿಗೊಳ್ಳುತ್ತದೆ. ದಯವಿಟ್ಟು ಸಂಬಂಧಪಟ್ಟವರು ಇಂತಹ ಬೆಳವಣಿಗೆಗಳನ್ನು ನಿಯಂತ್ರಿಸಲಿ.
ಅಶೋಕ ಓಜಿನಹಳ್ಳಿ,ಕೊಪ್ಪಳ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.