ADVERTISEMENT

ರಾಜ್ಯದಲ್ಲಿ ತೀವ್ರ ಬರ: ನಾಯಕರಿಗೆ ಚುನಾವಣೆಯದ್ದೇ ಚಿಂತೆ!

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2018, 20:15 IST
Last Updated 12 ನವೆಂಬರ್ 2018, 20:15 IST

ರಾಜ್ಯ ತೀವ್ರ ಬರವನ್ನು ಎದುರಿಸುತ್ತಿದ್ದರೂ ನಮ್ಮ ಸರ್ಕಾರವು ಚುನಾವಣಾ ಮೈತ್ರಿ, ಒಳ ಒಪ್ಪಂದ, ಖಾತೆ ಹಂಚಿಕೆ, ಜಯಂತಿ ಆಚರಣೆ, ಮುಂದಿನ ವರ್ಷ ನಡೆಯಲಿರುವ ಲೋಕ ಸಭಾ ಚುನಾವಣೆಯ ಮಹಾ ಘಟಬಂಧನ... ಎಂಬೆಲ್ಲ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಂಡಿದೆಯೇ ಹೊರತು, ನಾಡಿನ ಅಭಿವೃದ್ಧಿಯ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಆದ್ದರಿಂದ ಹೊಸ ಸರ್ಕಾರದಿಂದ ಹೊಸದನ್ನು ನಿರೀಕ್ಷಿಸುತ್ತಿರುವವರಿಗೆ ಭ್ರಮ ನಿರಸನವಾಗುವುದರಲ್ಲಿ ಸಂಶಯವಿಲ್ಲ.

ಸರ್ಕಾರ ಇನ್ನಾದರೂ ಚುನಾವಣೆಯನ್ನು ಗುರಿಯಾಗಿಟ್ಟ ಚಿಂತನೆ, ಕಾರ್ಯಕ್ರಮಗಳನ್ನು ಸ್ವಲ್ಪ ಹಿಂದಕ್ಕೆ ಸರಿಸಿ, ರಾಜ್ಯದ ಜ್ವಲಂತ ಸಮಸ್ಯೆಗಳತ್ತ ಗಮನಹರಿಸಲಿ. ಹಾಗಾಗದಿದ್ದಲ್ಲಿ ಮೈತ್ರಿ ಸರ್ಕಾರಕ್ಕೆ ಅನುವು ಮಾಡಿಕೊಟ್ಟ ರಾಜ್ಯದ ಜನತೆ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಪಾಠ ಕಲಿಸಲು ಮುಂದಾಗುತ್ತಾರೆ ಎಂಬುದು ಖಚಿತ.

–ಕಡೂರು ಫಣಿಶಂಕರ್, ಬೆಂಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.