ADVERTISEMENT

ವಾಚಕರ ವಾಣಿ: ಪ್ರಜಾತಂತ್ರಕ್ಕೆ ಮಾರಕವಾಗುವ ಚಿಂತನೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2022, 19:31 IST
Last Updated 7 ನವೆಂಬರ್ 2022, 19:31 IST

‘ನ್ಯಾಯಮೂರ್ತಿಗಳನ್ನು ನೇಮಿಸುವ ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಪದ್ಧತಿ ಅಪಾರದರ್ಶಕವಾಗಿದ್ದು ಇದು ಬದಲಾಗಬೇಕು. ಸರ್ಕಾರವೇ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ಪದ್ಧತಿ ಎಲ್ಲ ರಾಷ್ಟ್ರಗಳಲ್ಲೂ ಇದೆ’ ಎಂದು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಆಘಾತಕಾರಿ ಹೇಳಿಕೆ(ಪ್ರ.ವಾ., ನ. 6) ನೀಡಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನ, ಪ್ರಜಾತಂತ್ರದ ಅಡಿಪಾಯಗಳಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಾ ಬಂದಿದೆ. ರಾಜ್ಯಗಳಿಗೆ ಅನುದಾನ ಹಂಚಿಕೆ, ಜಿಎಸ್‌ಟಿಯಲ್ಲಿ ಪಕ್ಷಪಾತದ ಧೋರಣೆ ಅನುಸರಿಸಿ, ಒಕ್ಕೂಟ ವ್ಯವಸ್ಥೆಯ ಅಡಿಪಾಯವನ್ನು ದುರ್ಬಲಗೊಳಿಸುತ್ತಿದೆ. ರಾಜ್ಯಪಾಲರ ಮೂಲಕ ಚುನಾಯಿತ ಸರ್ಕಾರಗಳ ಆಡಳಿತದಲ್ಲಿ ಮೂಗು ತೂರಿಸಲಾಗುತ್ತಿದೆ. ಅಂತೆಯೇ ಪ್ರಜಾತಂತ್ರಕ್ಕೆ ಅಡಿಗಲ್ಲಾಗಿ ಉಳಿದಿರುವ ಸುಪ್ರೀಂ ಕೋರ್ಟಿನ ಹಕ್ಕುಗಳಿಗೂ ಚ್ಯುತಿ ತರುವಂತೆ, ನ್ಯಾಯಾಧೀಶರ ನೇಮಕಾತಿಯ ಹಕ್ಕನ್ನೂ ಸರ್ಕಾರ ಸ್ವಾಧೀನಕ್ಕೆ ಪಡೆದರೆ ದೇಶವು ಪ್ರಜಾತಾಂತ್ರಿಕವಾಗಿ ಉಳಿದೀತೆ?‌

–ಕೆ.ಎನ್.ಭಗವಾನ್, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT