ADVERTISEMENT

ವಾಚಕರ ವಾಣಿ: ಎಲ್ಲರಿಗೂ ಗೊತ್ತಿರುವ ಸತ್ಯ!

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2022, 19:30 IST
Last Updated 30 ಆಗಸ್ಟ್ 2022, 19:30 IST

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕು ಪಂಚಾಯಿತಿಗೆ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಾಹಕ ಅಧಿಕಾರಿಯನ್ನು ನೇಮಕ ಮಾಡಿರುವುದಾಗಿ ವರದಿಯಾಗಿದೆ (ಪ್ರ.ವಾ., ಆ. 30). ಆದರೆ ಈಗಿನ ಸರ್ಕಾರದಲ್ಲಿ ಇದು ಹೊಸ ವಿಷಯವೇನಲ್ಲ. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ನಿರ್ದೇಶಕರ ಹುದ್ದೆಗೆ ಈಗ ಎರಡು ವರ್ಷಗಳ ಹಿಂದೆಯೇ ಗುತ್ತಿಗೆ ಆಧಾರದ ಮೇಲೆ ನಿವೃತ್ತ ನೌಕರರೊಬ್ಬರನ್ನು ನೇಮಕ ಮಾಡಲಾಗಿದೆ. ಮತ್ತೂ ಆಶ್ಚರ್ಯಕರ ಸಂಗತಿ ಎಂದರೆ, ಅವರಿಗೆ 69 ವರ್ಷ ಹಾಗೂ ಇನ್ನೂ ಆ ಹುದ್ದೆಯಲ್ಲಿ ಮುಂದುವರಿಯುತ್ತಿದ್ದಾರೆ. ಈ ರೀತಿಯ ನೇಮಕಾತಿಗಳು ರಾಜಾರೋಷವಾಗಿ ನಡೆಯುತ್ತವೆ ಎಂಬುದು ಎಲ್ಲರಿಗೂ ಗೊತ್ತಿರುವ ಸತ್ಯ.

-ಆತ್ರೇಯ, ಶಿವಮೊಗ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT