ತೆರಿಗೆ ಪಾವತಿಗೆ ಹಿಂದೇಟು ಹಾಕಿದ ತಮಿಳು ಚಿತ್ರರಂಗದ ಜನಪ್ರಿಯ ನಟ ವಿಜಯ್ ಅವರನ್ನು ಮದ್ರಾಸ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿರುವುದು (ಪ್ರ.ವಾ., ಜುಲೈ 14) ಸರಿಯಾಗಿದೆ. ಜನಸಾಮಾನ್ಯರು ತಾವು ಕಷ್ಟಪಟ್ಟು ದುಡಿದ ಹಣವನ್ನು ಚಲನಚಿತ್ರ ನೋಡಲು ಸುರಿಯುತ್ತಾರೆ. ಇದರಿಂದ ದೊರೆತ ಪ್ರತಿಫಲವೇ ವಿಜಯ್ ಅವರಂತಹ ನಟರಿಗೆ ಹಣದ ಸುರಿಮಳೆಯಾಗುವುದು.
ನ್ಯಾಯಮೂರ್ತಿಯವರ ಪ್ರತೀ ಮಾತು ವಿಜಯ್ ಒಬ್ಬರಿಗೆ ಮಾತ್ರವಲ್ಲ, ತೆರಿಗೆ ಪಾವತಿಸಲು ಹಿಂದೇಟು ಹಾಕುವ ಪ್ರತಿಯೊಬ್ಬರಿಗೂ ಅನ್ವಯವಾಗುತ್ತದೆ. ತೆರಿಗೆ ಹಣದಿಂದಲೇ ಸರ್ಕಾರ ಸಕಲ ಅಭಿವೃದ್ಧಿ ಕಾರ್ಯಗಳನ್ನೂ ಕೈಗೊಳ್ಳಲು ಸಾಧ್ಯ ಎಂಬ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ.
- ಬಾಲಕೃಷ್ಣ ಎಂ.ಆರ್.,ಬೆಂಗಳೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.