ADVERTISEMENT

ರೈತನ ಪ್ರಾಮಾಣಿಕತೆ ಪ್ರಶಂಸನೀಯ

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 19:30 IST
Last Updated 29 ಜೂನ್ 2020, 19:30 IST

ಕೇವಲ 3 ರೂಪಾಯಿ 46 ಪೈಸೆ ಸಾಲದ ಹಣಕ್ಕಾಗಿ ಶಿವಮೊಗ್ಗ ಜಿಲ್ಲೆ ಹೊಸನಗರದ ನಿಟ್ಟೂರು ಸಮೀಪದ ಅಮಡೆ ಗ್ರಾಮದ ರೈತ ಲಕ್ಷ್ಮಿನಾರಾಯಣ ಅವರೊಂದಿಗೆ ಕೆನರಾ ಬ್ಯಾಂಕ್ ಸಿಬ್ಬಂದಿಯು ನಡೆದುಕೊಂಡ ರೀತಿ ಸರಿಯಲ್ಲ. ಬ್ಯಾಂಕ್‌ಗಳಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದು ಮರುಪಾವತಿಸದೆ ವಿದೇಶಕ್ಕೆ ಪರಾರಿಯಾದವರಿದ್ದಾರೆ. ಹೀಗಿರುವಾಗ, ಕೊರೊನಾ ಲಾಕ್‌ಡೌನ್ ಕಾರಣ ಸಾರಿಗೆ ಸೌಲಭ್ಯವಿಲ್ಲದಿದ್ದರೂ ತಮ್ಮ ಗ್ರಾಮದಿಂದ 15 ಕಿ.ಮೀ. ನಡೆದುಬಂದು ಅತ್ಯಲ್ಪ ಮೊತ್ತದ ಹಣ ಪಾವತಿಸಿದ ರೈತನ ಪ್ರಾಮಾಣಿಕತೆ ಪ್ರಶಂಸನೀಯ.

–ವಡ್ನಾಳ್ ರಮೇಶ, ಚನ್ನಗಿರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.