ADVERTISEMENT

ಬೇಕಾಗಿದೆ ವಿಶೇಷ ಪ್ಯಾಕೇಜ್

​ಪ್ರಜಾವಾಣಿ ವಾರ್ತೆ
Published 13 ಮೇ 2021, 19:31 IST
Last Updated 13 ಮೇ 2021, 19:31 IST

ಕೋವಿಡ್ –19 ಎರಡನೇ ಅಲೆ ತಡೆಯಲು ಸರ್ಕಾರ ಘೋಷಿಸಿರುವ ಲಾಕ್‌ಡೌನ್‌ನಿಂದಾಗಿ ತೊಂದರೆ ಅನುಭವಿಸುತ್ತಿರುವ ದಿನಗೂಲಿ ಕಾರ್ಮಿಕರ ಕಷ್ಟಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕಾಗಿದೆ. ಇಂತಹ ಕಠಿಣ ಲಾಕ್‌ಡೌನ್ ಸಮಯದಲ್ಲಿ ದಿನಗೂಲಿ ಕಾರ್ಮಿಕರು ಕೆಲಸವಿಲ್ಲದೆ ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನೂ (ನರೇಗಾ) ಲಾಕ್‌ಡೌನ್ ಕಾರಣದಿಂದ ಸ್ಥಗಿತಗೊಳಿಸಿರುವುದು ಖಂಡನೀಯ.

ಲಾಕ್‌ಡೌನ್‌ನಂತಹ ಕಠಿಣ ಸಮಯದಲ್ಲಿ ಉದ್ಯೋಗ ಖಾತರಿ ಯೋಜನೆಯು ಬಡಜನರ ನೆರವಿಗೆ ಬರುತ್ತದೆ. ಆದ್ದರಿಂದ ಸರ್ಕಾರವು ಈ ಯೋಜನೆಯನ್ನು ಕೂಡಲೇ ಪುನರಾರಂಭಿಸಬೇಕು. ಇಲ್ಲವಾದಲ್ಲಿ ದಿನಗೂಲಿ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ, ಪ್ರತೀ ಕೂಲಿ ಕಾರ್ಮಿಕರ ಖಾತೆಗೆ ಕನಿಷ್ಠ ₹ 10 ಸಾವಿರ ಹಾಕಬೇಕು.‌

–ಫಕ್ರುದ್ದೀನ್ ಚನಗ್ಲೇರ್, ಸುಲೇಪೇಟ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.