ಕೋವಿಡ್ –19 ಎರಡನೇ ಅಲೆ ತಡೆಯಲು ಸರ್ಕಾರ ಘೋಷಿಸಿರುವ ಲಾಕ್ಡೌನ್ನಿಂದಾಗಿ ತೊಂದರೆ ಅನುಭವಿಸುತ್ತಿರುವ ದಿನಗೂಲಿ ಕಾರ್ಮಿಕರ ಕಷ್ಟಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕಾಗಿದೆ. ಇಂತಹ ಕಠಿಣ ಲಾಕ್ಡೌನ್ ಸಮಯದಲ್ಲಿ ದಿನಗೂಲಿ ಕಾರ್ಮಿಕರು ಕೆಲಸವಿಲ್ಲದೆ ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನೂ (ನರೇಗಾ) ಲಾಕ್ಡೌನ್ ಕಾರಣದಿಂದ ಸ್ಥಗಿತಗೊಳಿಸಿರುವುದು ಖಂಡನೀಯ.
ಲಾಕ್ಡೌನ್ನಂತಹ ಕಠಿಣ ಸಮಯದಲ್ಲಿ ಉದ್ಯೋಗ ಖಾತರಿ ಯೋಜನೆಯು ಬಡಜನರ ನೆರವಿಗೆ ಬರುತ್ತದೆ. ಆದ್ದರಿಂದ ಸರ್ಕಾರವು ಈ ಯೋಜನೆಯನ್ನು ಕೂಡಲೇ ಪುನರಾರಂಭಿಸಬೇಕು. ಇಲ್ಲವಾದಲ್ಲಿ ದಿನಗೂಲಿ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ, ಪ್ರತೀ ಕೂಲಿ ಕಾರ್ಮಿಕರ ಖಾತೆಗೆ ಕನಿಷ್ಠ ₹ 10 ಸಾವಿರ ಹಾಕಬೇಕು.
–ಫಕ್ರುದ್ದೀನ್ ಚನಗ್ಲೇರ್, ಸುಲೇಪೇಟ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.