ಮುಕ್ಕಾಲು ಗಂಟೆ ಹೊತ್ತು ಒಂದೇ ಸಮನೆ 108ಕ್ಕೆ ಕರೆ ಮಾಡಿದರೂ ಆಂಬುಲೆನ್ಸ್ ಸಿಗದಿದ್ದರಿಂದ ಬೇಸತ್ತ ಶಿವಕುಮಾರ್ ಎಂಬುವರು ತಮ್ಮ ಸ್ನೇಹಿತನ ಆಟೊದಲ್ಲೇ ಅಮ್ಮನ ಶವ ಸಾಗಿಸಿದ್ದಾರೆ (ಪ್ರ.ವಾ., ಮೇ 11). ಇಂತಹ ಸಂದಿಗ್ಧ ಪರಿಸ್ಥಿತಿಯು ಸರ್ಕಾರದ ಯೋಜನೆಗಳಿಗೆ ಕನ್ನಡಿ ಹಿಡಿದಂತಿದೆ. ಆಟೊ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಶಿವಕುಮಾರ್, ತಾಯಿಯ ಶವವನ್ನು ಎಡಗೈಯಿಂದ ಬಿಗಿಯಾಗಿ ಅಪ್ಪಿ ಹಿಡಿದಿದ್ದ ದೃಶ್ಯ ಮನಕಲಕುವಂತಿದೆ.
ಮಾನವೀಯತೆಯನ್ನು ಜಗಕ್ಕೆ ಸಾರಿದ ದೇಶದಲ್ಲಿ ಇಂದು ಮಾನವೀಯತೆಗೆ ಕೈಚಾಚುವ ಪರಿಸ್ಥಿತಿ ಬಂದಿದೆ. ಮನುಷ್ಯತ್ವ ಸತ್ತು
ಹೋಗಿರುವುದು ಜನರಲ್ಲಿ ಅಲ್ಲ ಜನಪ್ರತಿನಿಧಿಗಳಲ್ಲಿ. ಕೋವಿಡ್ ಮೊದಲನೇ ಅಲೆಯಿಂದ ಪಾಠ ಕಲಿಯದ ಸರ್ಕಾರ, ತೀವ್ರ ಸಂಕಷ್ಟದ ಸಮಯದಲ್ಲಿ ಎಚ್ಚೆತ್ತುಕೊಳ್ಳಲು ಹೋಗಿದೆ. ಸಾಲಗಳ ಕೂಪಕ್ಕೆ ಬಿದ್ದ ಮಧ್ಯಮ ವರ್ಗ, ತೀರಾ ಸಂಕಷ್ಟದಲ್ಲಿರುವ ಕೆಳವರ್ಗ ಮತ್ತು ನಕಾರಾತ್ಮಕ ಚಿಂತನೆಗೆ ಬಿದ್ದಿರುವ ಯುವಜನರಿಗಾಗಿ ಯಾವ ಬಗೆಯ ಯೋಜನೆಗಳನ್ನು ರೂಪಿಸಿದೆ ಎಂಬುದನ್ನು ಸರ್ಕಾರ ತಿಳಿಸಬೇಕು.
–ಸತೀಶ್ ಬಿ.ಆರ್., ಬೆಂಗಳೂರು
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.