ADVERTISEMENT

ಕನ್ನಡಪರ ಸಂಘಟನೆಗಳಿಗೆ ಪ್ರತಿಷ್ಠೆಯ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2020, 19:45 IST
Last Updated 27 ಜನವರಿ 2020, 19:45 IST

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಮ್ಮನ್ನು ಕಡೆಗಣಿಸಲಾಗಿದೆ ಎಂದು ಪ್ರತಿಭಟನೆ ನಡೆಸಿದ್ದ ಕನ್ನಡಪರ ಸಂಘಟನೆಗಳಿಗೆ ಕಲಬುರ್ಗಿ ಜಿಲ್ಲಾಡಳಿತವು ಕನ್ನಡ ಸಾಹಿತ್ಯ ಕುರಿತಾದ ಸ್ಪರ್ಧೆ ಅಯೋಜಿಸಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ. ಹೀಗಾಗಿ, ಭಾಷಾಭಿಮಾನದ ಜೊತೆಗೆ ಭಾಷಾ ಜ್ಞಾನವನ್ನೂ ಸಾಬೀತುಪಡಿಸಬೇಕಾದ ಒತ್ತಡದಲ್ಲಿರುವ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳಿಗೆ ಇದೊಂದು ಪ್ರತಿಷ್ಠೆಯ ಸ್ಪರ್ಧೆಯಾಗಿದೆ. ಸಂಘಟನೆಯ ಗೌರವವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಅವರ ಮೇಲಿದೆ.

- ವಸಂತ ಕುಮಾರ್ ಮಲ್ಲಾಪುರ,ದಾವಣಗೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT