ಇಡೀ ದೇಶವನ್ನು ತಲ್ಲಣಗೊಳಿಸಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಗಿದೆ. ಇದು, ಇಡೀ ಸ್ತ್ರೀ ಕುಲಕ್ಕೆ ದೊರೆತ ನೈತಿಕ ಹಾಗೂ ಕಾನೂನಾತ್ಮಕ ಜಯವಾಗಿದೆ. ಈ ಅಪರಾಧಿಗಳು ಸಾಧ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಬಳಸಿಕೊಂಡಿದ್ದರೂ ಅವರ ಪ್ರಯತ್ನಗಳೆಲ್ಲ ವಿಫಲವಾದವು. ಒಂದಲ್ಲ ಒಂದು ಕಾರಣವನ್ನು ಮುಂದಿಟ್ಟುಕೊಂಡು ನೇಣಿನ ಕುಣಿಕೆಯಿಂದ ಪಾರಾಗಲು ಪ್ರಯತ್ನಿಸಿದರಾದರೂ ಅವರ ಆಟ ಹೆಚ್ಚು ಕಾಲ ನಡೆಯಲಿಲ್ಲ.
ಕೆ.ವಿ.ವಾಸು, ಮೈಸೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.