ADVERTISEMENT

ವಿಜಯ್‌ ಮಲ್ಯ ಭಾರತಕ್ಕೆ: ಆರ್ಥಿಕ ಅಪರಾಧಕ್ಕೆ ಹಿನ್ನಡೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2019, 19:31 IST
Last Updated 7 ಫೆಬ್ರುವರಿ 2019, 19:31 IST

ಭಾರತೀಯ ಬ್ಯಾಂಕ್‌ಗಳಿಗೆ ₹ 9 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ಸಾಲ ಮರುಪಾವತಿಸದೆ ಲಂಡನ್‌ಗೆ ಪರಾರಿಯಾಗಿರುವ ಉದ್ಯಮಿ ವಿಜಯ್‌ ಮಲ್ಯ ಅವರನ್ನು ಭಾರತಕ್ಕೆ ಮರಳಿ ಕರೆತರುವ ಕೇಂದ್ರ ಸರ್ಕಾರದ ಸತತ ಪ್ರಯತ್ನಕ್ಕೆ ಯಶಸ್ಸು ದೊರಕಿದೆ. ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸಲು ಬ್ರಿಟನ್ ಗೃಹ ಸಚಿವಾಲಯದ ಕಾರ್ಯದರ್ಶಿ ಒಪ್ಪಿಗೆ ನೀಡಿರುವುದು ಆಶಾದಾಯಕ ಬೆಳವಣಿಗೆ. ಇದರಿಂದ, ಆರ್ಥಿಕ ಅಪರಾಧಿ ಮಲ್ಯ ಅವರನ್ನು ಭಾರತಕ್ಕೆ ಕರೆತಂದು ವಿಚಾರಣೆಗೆ ಒಳಪಡಿಸಲು ಸಾಧ್ಯವಾಗಲಿದೆ.

ಆರ್ಥಿಕ ಅಪರಾಧಗಳನ್ನು ಎಸಗಿ ವಿದೇಶಗಳಲ್ಲಿ ತಲೆ ಮರೆಸಿಕೊಂಡಿರುವ ಇತರ ಆರೋಪಿಗಳನ್ನು ಕರೆತರಲು ಸಹ ಸರ್ಕಾರ ಇಂತಹುದೇ ಪ್ರಯತ್ನಗಳನ್ನು ನಡೆಸಬೇಕು.

-ಈರಣ್ಣ ಹೊಸಗೌಡರ,ಬಾಗಲಕೋಟೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.