ADVERTISEMENT

ಎಡದಂಡೆ ನಾಲೆಗೆ ನೀರು ಹರಿಸಿ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2019, 20:00 IST
Last Updated 4 ಆಗಸ್ಟ್ 2019, 20:00 IST

ತುಂಗಭದ್ರಾ ಜಲಾಶಯಕ್ಕೆ ಈಗ ನೀರಿನ ಒಳಹರಿವಿನ ಪ್ರಮಾಣ ಅಧಿಕವಾಗಿದೆ. ವಾರದೊಳಗೆ ಎಡದಂಡೆ ನಾಲೆಗೆ ನೀರು ಹರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಕಳೆದ ನಾಲ್ಕು ವರ್ಷಗಳಿಂದ ಅನಾವೃಷ್ಟಿಯಿಂದ ಸರಿಯಾಗಿ ಬೆಳೆ ಬಾರದೆ ರೈತರು ಅತ್ಯಂತ ಸಂಕಷ್ಟದಲ್ಲಿದ್ದಾರೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಆಗಸ್ಟ್‌ ತಿಂಗಳ ಮೊದಲ ಎರಡು ವಾರಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಎಡದಂಡೆ ನಾಲೆಗೆ ನೀರು ಹರಿಸುವ ಸಂಬಂಧ ಈ ಭಾಗದ ಎಲ್ಲ ಶಾಸಕರೂ ಗಮನ ಹರಿಸಬೇಕು.

ಒಂದು ವೇಳೆ ಮುಂದಿನ ದಿನಗಳಲ್ಲಿ ನೀರಿನ ಅಭಾವ ಎದುರಾಗುವ ಸೂಚನೆ ಇದ್ದರೆ, ಅದನ್ನು ಸರ್ಕಾರ ಮೊದಲೇ ಸ್ಪಷ್ಟಪಡಿಸಬೇಕು. ಇದರಿಂದ ಯಾವ ಬೆಳೆ ಬೆಳೆಯಬೇಕು ಎನ್ನುವ ತೀರ್ಮಾನ ಕೈಗೊಳ್ಳಲು ರೈತರಿಗೆ ನೆರವಾಗುತ್ತದೆ.

ವಿಜಯ್‌ಕುಮಾರ್ ಎಚ್.ಕೆ., ರಾಯಚೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.