ADVERTISEMENT

ವಾಚಕರ ವಾಣಿ: ಮರುಪರೀಕ್ಷೆ ನಡೆಯುವುದೆಂದು?

​ಪ್ರಜಾವಾಣಿ ವಾರ್ತೆ
Published 3 ಜೂನ್ 2022, 19:30 IST
Last Updated 3 ಜೂನ್ 2022, 19:30 IST

545 ಹುದ್ದೆಗಳಿಗೆ ನಡೆದ ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆದ ಆರೋಪ ಕೇಳಿಬಂದ ಕಾರಣ, ನೇಮಕಾತಿ ರದ್ದು ಮಾಡಿ, ಸದ್ಯದಲ್ಲಿಯೇ ಮರುಪರೀಕ್ಷೆ ನಡೆಸುವುದಾಗಿ ಗೃಹ ಸಚಿವರು ಮಾಧ್ಯಮಗೋಷ್ಠಿಯಲ್ಲಿ ಪ್ರಕಟಿಸಿದ್ದರು. ಮರುಪರೀಕ್ಷೆಯ ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಅವರು ಹೇಳಿದರೇ ವಿನಾ ಇನ್ನೂ ಅದರ ಬಗ್ಗೆ ಚಿಂತಿಸಲು ಅವರಿಗೆ ಸಮಯ ಸಿಕ್ಕಿದಂತೆ ಕಾಣುತ್ತಿಲ್ಲ.

ನಿಯತ್ತಾಗಿ ಪರೀಕ್ಷೆ ಬರೆದವರು ಮತ್ತೆ ಪರೀಕ್ಷೆ ಯಾವಾಗ ಎಂದು ಕಾದಿದ್ದೇ ಬಂತು. ಸರ್ಕಾರ ನಿದ್ರೆಯಿಂದ ಎಚ್ಚರಗೊಳ್ಳಲಿ, ಪರೀಕ್ಷೆಯ ದಿನಾಂಕ ಘೋಷಣೆಯಾಗಲಿ.

– ಬಸನಗೌಡ ಪಾಟೀಲ, ಯರಗುಪ್ಪಿ, ಧಾರವಾಡ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.