ವಿ.ಎಸ್. ರಮಾದೇವಿ ಅವರು ಕರ್ನಾಟಕದ ರಾಜ್ಯಪಾಲರಾಗಿದ್ದ ಅವಧಿಯಲ್ಲಿ ಕೆಲವೇ ದಿನಗಳಲ್ಲಿ ಕನ್ನಡ ಕಲಿತು, ಕನ್ನಡದಲ್ಲೇ ವ್ಯವಹರಿಸಿ ಜನರ ಮನಸ್ಸನ್ನು ಗೆದ್ದಿದ್ದರು. ಈಗಿನ ರಾಜ್ಯಪಾಲ ವಜೂಭಾಯಿ ವಾಲ ಕರ್ನಾಟಕಕ್ಕೆ ಬಂದು 4 ವರ್ಷಗಳಾಗಿದೆ. ಆದರೆ, ಇಂದಿಗೂ ಅವರು ತಮ್ಮ ಭಾಷಣಗಳನ್ನು ಹಿಂದಿಯಲ್ಲೇ ಮಾಡುತ್ತಾರೆ. ಇಷ್ಟು ವರ್ಷಗಳಾದರೂ ಕನ್ನಡ ಕಲಿಯಲು ಅವರಿಗೆ ಸಾಧ್ಯವಾಗಲಿಲ್ಲವೇ ಅಥವಾ ಕನ್ನಡ ಕಲಿಯುವುದು ಬೇಡ ಎನ್ನುವುದು ಅವರ ನಿಲುವೇ?
–ಅರುಣ್ ಜಾವಗಲ್, ಬೆಂಗಳೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.