ವನ್ಯಜೀವಿಗಳ ದಾಳಿಯಿಂದ ಸಾವಿಗೀಡಾಗುವವರ ಕುಟುಂಬಕ್ಕೆ ₹ 10 ಲಕ್ಷ ಪರಿಹಾರ ನೀಡುವುದೇನೋ ಸರಿ (ಪ್ರ.ವಾ., ಸೆ. 27). ಆದರೆ ಎಷ್ಟೇ ಕೋಟಿ ಕೊಟ್ಟರೂ ಹೋದ ಜೀವ ಮರಳಿ ಬಾರದು. ಜೀವಕ್ಕೆ ಬೆಲೆ ಕಟ್ಟಲಾದೀತೇ? ಮಾನವನ ದುರಾಸೆ ಮತ್ತು ಸ್ವಾರ್ಥದಿಂದಾಗಿ ಪ್ರಾಣಿಗಳ ಜೊತೆಗೆ ಆತನಿಗೆ ನಿರಂತರವಾಗಿ ಸಂಘರ್ಷ ನಡೆಯುತ್ತಲೇ ಇದೆ. ಮಾನವ ತನ್ನ ಸ್ವಾರ್ಥಕ್ಕೋಸ್ಕರ ಕಾಡುಗಳನ್ನು ಸರ್ವನಾಶ ಮಾಡಲು ಹೊರಟಿದ್ದಾನೆ. ಆಹಾರ ಸರಪಳಿಯ ವ್ಯತ್ಯಾಸದಿಂದ ಪ್ರಾಣಿಗಳು ನಾಡಿನ ಕಡೆಗೆ ಹೆಜ್ಜೆ ಹಾಕುತ್ತಿವೆ. ಸರ್ಕಾರ ಈಗಲೂ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಭಾರಿ ಬೆಲೆ ತೆರಬೇಕಾಗುತ್ತದೆ.
-ಮುರುಗೇಶ ಡಿ.,ದಾವಣಗೆರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.