ADVERTISEMENT

ಇದೊಂದು ಸಲ ನಮ್ಮನ್ನು ನೋಡಿ!

ಕೆ.ನರಸಿಂಹ ಮೂರ್ತಿ
Published 14 ಏಪ್ರಿಲ್ 2018, 19:30 IST
Last Updated 14 ಏಪ್ರಿಲ್ 2018, 19:30 IST

ಬಳ್ಳಾರಿ: ‘ಎಲ್ಲರನ್ನೂ ನೋಡಿದ್ದೀರಲ್ಲ. ಇದೊಂದ್‌ ಸಲ ನಮಗೂ ಅಧಿಕಾರ ಕೊಟ್ಟು ನೋಡಿ’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅರ್ಧ ತಮಾಷೆ, ಅರ್ಧ ಗಂಭೀರ ದನಿಯಲ್ಲಿ ನಕ್ಕರು.

ವಿಕಾಸ ಪರ್ವದ ಬಳಿಕ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಳ್ಳಾರಿ ನಗರ ಕ್ಷೇತ್ರದಲ್ಲಿ ಮುಸ್ಲಿಮರು ಹೆಚ್ಚಿರುವುದರಿಂದ ಇಕ್ಬಾಲ್‌ ಅಹ್ಮದ್ ಅವರಿಗೆ ಟಕೆಟ್‌ ನೀಡುವುದು ಅನಿವಾರ್ಯವಾಯಿತು’ ಎಂದರು.

‘ಇಕ್ಬಾಲ್‌ ಅಹ್ಮದ್‌ ಒಮ್ಮೆಯೂ ನಗರದ ಸಮಸ್ಯೆಗಳ ಕುರಿತು ಮಾತನಾಡಿಲ್ಲ. ಜನರೊಂದಿಗೆ ಬೆರೆತು ಓಡಾಡಿಲ್ಲ. ಈಗಿನ ಕಾಂಗ್ರೆಸ್‌ ಶಾಸಕ ಅನಿಲ್‌ಲಾಡ್‌ ಅವರಂತೆಯೇ ಇವರೂ ಜನರಿಂದ ದೂರ ಉಳಿದರೆ ಏನು ಪ್ರಯೋಜನ’ ಎಂದು ಸುದ್ದಿಗಾರರು ಪ್ರಶ್ನೆ ಎಸೆದರು.

ADVERTISEMENT

ಅದಕ್ಕೆ ನಗುತ್ತಲೇ ಉತ್ತರಿಸಿದ ಕುಮಾರಸ್ವಾಮಿ, ‘ಎಲ್ಲರನ್ನೂ ನೋಡಿದ್ದೀರಲ್ಲ. ಇದೊಂದ್‌ ಸಲ ನಮ್ಮನ್ನೂ ನೋಡಿ. ನಗರ ಕ್ಷೇತ್ರ ಅಭಿವೃದ್ಧಿಯ ಹೊಣೆಯನ್ನು ನಾನೇ ಹೊರುತ್ತೇನೆ’ ಎಂದರು.

‘ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನ ಡಿ.ಕೆ. ಶಿವಕುಮಾರ್ ಅವರೂ ಇದೇ ಮಾತುಗಳನ್ನು ಆಡಿದ್ದರು’ ಎಂದು ಪತ್ರಕರ್ತರು ನೆನಪಿಸಿದರು. ಅದಕ್ಕೆ ಕುಮಾರಸ್ವಾಮಿ ಪುನಃ ‘ಅವರನ್ನೂ ನೋಡಿದ್ದೀರಲ್ಲ. ನಮ್ಮನ್ನೂ ಒಮ್ಮೆ ನೋಡಿ’ ಎಂದು ಮತ್ತೆ ನಕ್ಕರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.