

ರಾಜ್ಯದ ಯಾವುದೇ ನೀರಾವರಿ ಯೋಜನೆ ಸಕಾಲದಲ್ಲಿ ಪೂರ್ಣವಾಗುತ್ತಿಲ್ಲ. ಯೋಜನೆ ಆರಂಭಿಸುವಾಗ ಇದ್ದ ಉತ್ಸಾಹ ಬಳಿಕ ಮರೆಯಾಗುತ್ತಿದೆ. ಇದರಿಂದಾಗಿ ರೈತರಿಗೂ ಲಾಭ ಪೂರ್ಣ ಪ್ರಮಾಣದಲ್ಲಿ ಸಿಗುತ್ತಿಲ್ಲ.
ಬಜೆಟ್ನಲ್ಲಿ ನೀರಾವರಿ ಉದ್ದೇಶಕ್ಕೆ ಸಾಕಷ್ಟು ಹಣ ಮೀಸಲಿಟ್ಟರೂ ಆ ಹಣವನ್ನು ನಿಗದಿತ ಕಾಲಾವಧಿಯಲ್ಲಿ ಖರ್ಚು ಮಾಡಿ, ಕಾಮಗಾರಿ ಪೂರ್ಣಗೊಳಿಸುವ ಕೆಲಸ ಆಗುತ್ತಿಲ್ಲ. ಹಾಗಾಗಿ, ಯೋಜನಾ ಗಾತ್ರವೂ ಹೆಚ್ಚುತ್ತಾ ಹೋಗುತ್ತಿದ್ದು ಹೊರೆಯಾಗುತ್ತಿದೆ. ನಿರ್ದಿಷ್ಟ ಕಾಲಾವಧಿ ಗೊತ್ತುಪಡಿಸಿ, ವರ್ಷಕ್ಕೆ ಇಂತಿಷ್ಟು ಹಣ ನೀಡಬೇಕು. ಆ ಮೂಲಕ ನೀರಾವರಿ ಯೋಜನೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಅಲ್ಲದೇ, ಕಡೇ ಭಾಗದ ಜಮೀನಿಗೂ ನೀರು ತಲುಪುವಂತೆ ನೋಡಿಕೊಳ್ಳಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.