ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸಲಾಗುತ್ತಿರುವ ‘ಪ್ರಜಾವಾಣಿ ಕ್ವಿಜ್ ಚಾಂಪಿಯನ್ಷಿಪ್ 2015–16’ರ ಬೆಂಗಳೂರು ವಲಯಮಟ್ಟದ ಸ್ಪರ್ಧೆಯ ಅಂತಿಮ ಸುತ್ತಿಗೆ ನಗರದ ಐದು ಶಾಲೆಗಳ ಆರು ತಂಡಗಳು ಆಯ್ಕೆಯಾಗಿವೆ.
ನಗರದ ಸೇಂಟ್ ಪೌಲ್ಸ್ ಶಾಲೆಯ ಎರಡು ತಂಡಗಳು, ಶ್ರೀಕುಮಾರ್ ಶಾಲೆ, ಸಿಎಂಆರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಪ್ರೆಸಿಡೆನ್ಸಿ ಶಾಲೆ ಮತ್ತು ಶ್ರೀ ಶ್ರೀ ರವಿಶಂಕರ್ ಶಾಲೆಯ ತಲಾ ಒಂದು ತಂಡ ಅಂತಿಮ ಸುತ್ತಿನಲ್ಲಿವೆ.
ಪ್ರತಿ ತಂಡದಲ್ಲಿ ಇಬ್ಬರು ವಿದ್ಯಾರ್ಥಿಗಳಿದ್ದಾರೆ. ಈ ಸುತ್ತಿನಲ್ಲಿ ಗೆಲುವು ಪಡೆದ ತಂಡ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗುತ್ತದೆ.
ವಲಯ ಮಟ್ಟದಲ್ಲಿ ವಿಜೇತರಾಗಿರುವ ವಿದ್ಯಾರ್ಥಿಗಳು ಅಂತಿಮ ಸುತ್ತಿನಲ್ಲಿ ಭಾಗವಹಿಸುತ್ತಾರೆ. ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.