ಮಂಗಳೂರು: ಬಹುನಿರೀಕ್ಷೆಯ ‘ಪ್ರಜಾವಾಣಿ’ ಕ್ವಿಜ್ ಚಾಂಪಿಯನ್ಷಿಪ್ನ ವಿಭಾಗಮಟ್ಟದ ಸ್ಪರ್ಧೆಗೆ ಶನಿವಾರ ಮಂಗಳೂರಿನಲ್ಲಿ ಚಾಲನೆ ನೀಡಲಾಯಿತು. ಇಲ್ಲಿನ ಕೆನರಾ ಬಾಲಕಿಯರ ಪ್ರೌಢಶಾಲೆಯ ಸುಧೀಂದ್ರ ಭವನದಲ್ಲಿ ಕ್ವಿಜ್ ಆರಂಭವಾಯಿತು.
63 ಶಾಲೆಗಳ 190 ತಂಡಗಳು ಈ ವಿಭಾಗಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡಿವೆ. ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪೋಷಕರು ಸಭಾಂಗಣದಲ್ಲಿ ನೆರೆದಿದ್ದಾರೆ. ಕ್ವಿಜ್ ಮಾಸ್ಟರ್ ರಾಘವ್ ಸ್ಪರ್ಧೆ ನಿರ್ವಹಿಸುತ್ತಿದ್ದಾರೆ.
ಇಲ್ಲಿ ವಿಜೇತವಾಗುವ ತಂಡ ಅಂತಿಮ ಸುತ್ತಿಗೆ ಆಯ್ಕೆಯಾಗುತ್ತದೆ. ಅಂತಿಮ ಸುತ್ತು ಜನವರಿ 21ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.