ಮೈಸೂರು: ಬಹು ನಿರೀಕ್ಷೆಯ ‘ಪ್ರಜಾವಾಣಿ’ ಕ್ವಿಜ್ ಚಾಂಪಿಯನ್ಷಿಪ್ಗೆ ಬುಧವಾರ ಚಾಲನೆ ನೀಡಲಾಯಿತು.
ಇಲ್ಲಿನ ಜೆ.ಕೆ.ಮೈದಾನದ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಅಮೃತಮಹೋತ್ಸವ ಭವನದಲ್ಲಿ ಬೆಳಿಗ್ಗೆ 8.30ಕ್ಕೆ ಕ್ವಿಜ್ ಆರಂಭವಾಯಿತು.
ಮೈಸೂರಿನಲ್ಲಿ ನಡೆಯುವುತ್ತಿರುವುದು ವಿಭಾಗ ಮಟ್ಟದ ಸ್ಪರ್ಧೆ. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ನೀಡಲಾಗುತ್ತದೆ.
ಇಲ್ಲಿ ವಿಜೇತವಾಗುವ ತಂಡ ಬೆಂಗಳೂರಿನ ಅಂತಿಮ ಸುತ್ತಿಗೆ ಆಯ್ಕೆಯಾಗುತ್ತದೆ. ಅಂತಿಮ ಸುತ್ತು ಜನವರಿ 21ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.